ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ನಡಿಗೆ ಶೂನ್ಯದೆಡೆಗೆ​, ಜೆಡಿಎಸ್​ ಗೆ ಗೇಟ್​ ಪಾಸ್: ಫಲಿತಾಂಶಕ್ಕೂ ಮುನ್ನ ಅಶೋಕ್​ ಭವಿಷ್ಯ

ಉಪಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕನ ಸ್ಥಾನ ತ್ಯಾಗ ಮಾಡಬೇಕಾಗಬಹುದು. ಜೆಡಿಎಸ್​ ಕರ್ನಾಟಕದಿಂದ ಗೇಟ್​ ಪಾಸ್​ ಪಡೆಯುತ್ತೆ. ಹೊಸ ಹೆಜ್ಜೆ ಇಡುವ ಸುಭದ್ರ ಸರ್ಕಾರ ಮುಂದುವರೆಯುತ್ತೆ. ನಮಗೆ ಬಹು ಮತಕ್ಕಿಂತ ಹೆಚ್ಚಿನ ಸ್ಥಾನ ಬರೋದು ನೂರಕ್ಕೆ ನೂರು ಖಚಿತ. ಸಮೀಕ್ಷೆಗಳಲ್ಲೂ ಬಿಜೆಪಿ ಗೆಲ್ಲುತ್ತೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಸರ್ಕಾರ ಮುಂದುವರೆಸಲು ಮತದಾರರು ತೀರ್ಮಾನಿಸಿದ್ದಾರೆ ಎಂದು ಸಚಿವ ಆರ್​. ಆಶೋಕ್ ಭವಿಷ್ಯ ನುಡಿದಿದ್ದಾರೆ.

By

Published : Dec 8, 2019, 7:35 PM IST

r-ashok-statement-on-by-election-result
ಕಂದಾಯ ಸಚಿವ ಆರ್. ಅಶೋಕ್

ಉಡುಪಿ:ಬಿಜೆಪಿ 14-15 ಸ್ಥಾನಗಳಲ್ಲಿ ಗೆಲ್ಲುತ್ತೆ. ಫಲಿತಾಂಶದ ನಂತರ ಕಾಂಗ್ರೆಸ್ ನಡಿಗೆ ಶೂನ್ಯದ ಕಡೆಗೆ ಹೋಗುತ್ತೆ. ಕಾಂಗ್ರೆಸ್ ನಾಯಕರನ್ನು ಮನೆಗೆ ಕಳುಹಿಸುವ ಫಲಿತಾಂಶ ಈ ಉಪಚುನಾವಣೆ ನೀಡುತ್ತೆ ಎಂದು ಕಂದಾಯ ಸಚಿವ ಆರ್. ಅಶೋಕ್ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕನ ಸ್ಥಾನ ತ್ಯಾಗ ಮಾಡಬೇಕಾಗಬಹುದು. ಜೆಡಿಎಸ್​ ಕರ್ನಾಟಕದಿಂದ ಗೇಟ್​ ಪಾಸ್​ ಪಡೆಯುತ್ತೆ. ಹೊಸ ಹೆಜ್ಜೆ ಇಡುವ ಸುಭದ್ರ ಸರ್ಕಾರ ಮುಂದುವರೆಯುತ್ತೆ. ನಮಗೆ ಬಹುಮತಕ್ಕಿಂತ ಹೆಚ್ಚಿನ ಸ್ಥಾನ ಬರೋದು ನೂರಕ್ಕೆ ನೂರು ಖಚಿತ. ಸಮೀಕ್ಷೆಗಳಲ್ಲೂ ಬಿಜೆಪಿ ಗೆಲ್ಲುತ್ತೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಸರ್ಕಾರ ಮುಂದುವರೆಸಲು ಮತದಾರರು ತೀರ್ಮಾನಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಮೈತ್ರಿ ರಚನೆ ಕೇವಲ ಭ್ರಮೆ

ಮತ್ತೊಮ್ಮೆ ಕಾಂಗ್ರೆಸ್ ಜೆಡಿಎಸ್ ಒಂದಾಗೋದು ಕೇವಲ ಭ್ರಮೆ. ದೇವೇಗೌಡರು ಕೂಡಾ ಕಾಂಗ್ರೆಸ್ ಜೊತೆ ಹೋಗಲ್ಲ ಅಂದಿದ್ದಾರೆ. ಖರ್ಗೆ ಸೋತಿದ್ದಾರೆ. ಎರಡೂ ಪಕ್ಷಗಳು ಒಡೆದು ನಾಲ್ಕು ಪಾರ್ಟಿ ಆಗಿವೆ. ಈಗ ನಾಲ್ಕು ಪಾರ್ಟಿ ಒಂದಾಗೋದು ಯಾವಾಗ? ನಾಯಕನನ್ನು ಆಯ್ಕೆ ಮಾಡೋದು ಯಾವಾಗ? ಕಾಂಗ್ರೆಸ್ ಭ್ರಮಾಲೋಕದಲ್ಲಿದ್ದು, ಅವರು ಅಲ್ಲೇ ಇರಲಿ ಎಂದು ವ್ಯಂಗ್ಯವಾಡಿದರು.

ಉಪ ಸಮರದ ಫಲಿತಾಂಶ ಕುರಿತು ಅಶೋಕ್ ಭವಿಷ್ಯ

ಶಿವಸೇನೆಯಿಂದ ಬೆಳಗಾವಿ ಗಡಿ ಕ್ಯಾತೆ

ನಮ್ಮ ಗಡಿಯ ತಂಟೆಗೆ ಬಂದ್ರೆ ನಾವಂತೂ ಸುಮ್ಮನಿರಲ್ಲ ಎಂದು ಶಿವಸೇನೆಗೆ ಕಂದಾಯ ಸಚಿವರು ಎಚ್ಚರಿಕೆ ನೀಡಿದ ಅಶೋಕ್, ಗಡಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಬೆಳಗಾವಿಯು ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ದೊಂಬರಾಟ ಮಾಡ್ಬೇಡಿ ಹುಷಾರ್. ಹೇಗೆ ತಿರುಗೇಟು ಕೊಡ್ಬೇಕು ಅಂತ ನಮಗೂ ಗೊತ್ತು. ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ, ರಾಜ್ಯ ಸರ್ಕಾರಕ್ಕೆ ಈ ವಿಚಾರದಲ್ಲಿ ಬದ್ಧತೆ ಇದೆ. ಸರೋಜಿನಿ‌ ಮಹಿಷಿ ವರದಿಯನ್ನೂ ಪರಿಗಣಿಸಿ, ಕನ್ನಡಕ್ಕೆ ಅಗ್ರಸ್ಥಾನ ನೀಡ್ತೇವೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯವೂ ಹೌದು ಅಂತ ಅಶೋಕ್ ಸ್ಪಷ್ಟಪಡಿಸಿದರು.

ಹೈದರಾಬಾದ್​ ಎನ್​ಕೌಂಟರ್​​ ಪ್ರಕರಣವನ್ನು ಅಲ್ಲಿನ ಸರ್ಕಾರ ನೋಡಿಕೊಳ್ಳುತ್ತೆ:

ಹೈದರಾಬಾದ್ ಘಟನೆಗೆ ಇಡೀ ದೇಶದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನ್ಯಾಯ ವಿಳಂಬ ಆಗ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಆಗ್ತಾ ಇಲ್ಲ ಎಂಬ ಅಭಿಪ್ರಾಯ ಸರಿಯಲ್ಲ. ನ್ಯಾಯ ಪರಿಪಾಲನೆ ಹೇಗೆ ಮಾಡೋದು ಅಂತ ನ್ಯಾಯಾಲಯ ತೀರ್ಮಾನ ಮಾಡುತ್ತೆ. ಎನ್​ಕೌಂಟರ್​ ಬಗ್ಗೆ ಅಲ್ಲಿನ ಸರ್ಕಾರ ಇದೆ ನೋಡಿಕೊಳ್ಳುತ್ತೆ. ಈಗಾಗಲೇ ಸ್ವಯಂ ರಕ್ಷಣೆಗೆ ಪೊಲೀಸರು ಈ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ತನಿಖೆಯ ನಂತರ ಎಲ್ಲಾ ಸತ್ಯಸಂಗತಿಗಳು ಬೆಳಕಿಗೆ ಬರುತ್ತವೆ ಎಂದು ಸಚಿವ ಅಶೋಕ್​ ಹೇಳಿದ್ರು.

ABOUT THE AUTHOR

...view details