ಕರ್ನಾಟಕ

karnataka

ETV Bharat / state

ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ: ಶಾಸಕಿ ರೂಪಾಲಿ ನಾಯ್ಕ ವಿವಾದಾತ್ಮಕ ಹೇಳಿಕೆ ವೈರಲ್​ - ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕಿ ರೂಪಾಲಿ ನಾಯ್ಕ

ನಮ್ಮ ಹುಡುಗ ದಾರುಣವಾಗಿ ಕೊಲೆಗೀಡಾದ. ನಾವು ಅಧಿವೇಶನದಲ್ಲಿ ಕುಳಿತು ಅತ್ತಿದ್ದೇವೆ. ಆದ್ರೆ ನಾವೂ ಸಹ ಹಿಂದೂಗಳು ಎಂದು ಹೇಳಿಕೊಳ್ಳುವ ಕೆಲವರು ವಿಧಾನಸಭೆಯೊಳಗೆ ಇದ್ದು ಸಚಿವ ಈಶ್ವರಪ್ಪರನ್ನು ಅಮಾನತು ಮಾಡಿ ಎಂದು ಆಗ್ರಹಿಸುತ್ತಿದ್ದರು ಎಂದು ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ಧ ಶಾಸಕಿ ರೂಪಾಲಿ ನಾಯ್ಕ ಹರಿಹಾಯ್ದರು.

ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕಿ ರೂಪಾಲಿ ನಾಯ್ಕ
ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕಿ ರೂಪಾಲಿ ನಾಯ್ಕ

By

Published : Feb 28, 2022, 6:51 PM IST

Updated : Feb 28, 2022, 7:14 PM IST

ಕಾರವಾರ: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಹಿನ್ನೆಲೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಆಡಿದ ಹೇಳಿಕೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಂಕೋಲಾದಲ್ಲಿ ನಡೆದ ಶಿವಾಜಿ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ, ನಮ್ಮ ಹುಡುಗ ದಾರುಣವಾಗಿ ಸಾವನ್ನಪ್ಪಿದ್ದಾನೆ. ನಾವು ಅಧಿವೇಶನದಲ್ಲಿ ಕುಳಿತು ಅತ್ತಿದ್ದೇವೆ. ಆದ್ರೆ ನಾವೂ ಸಹ ಹಿಂದೂಗಳು ಎಂದು ಹೇಳಿಕೊಳ್ಳುವವರು ವಿಧಾನಸಭೆಯ ಒಳಗೆ ಇದ್ದು, ಸಚಿವ ಈಶ್ವರಪ್ಪರನ್ನು ಅಮಾನತು ಮಾಡಿ ಎಂದು ಆಗ್ರಹಿಸುತ್ತಿದ್ದರು. ಇದು ನಾಚಿಕೆಗೇಡಿನ ಸಂಗತಿ ಎಂದು ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

ಶಾಸಕಿ ರೂಪಾಲಿ ನಾಯ್ಕ ವಿವಾದಾತ್ಮಕ ಹೇಳಿಕೆ ವೈರಲ್​

ಇದನ್ನೂ ಓದಿ: ಉಕ್ರೇನ್​ನಲ್ಲಿ ಪರದಾಟ: ಯೋಗಿಜೀ, ಮೋದಿ ಜೀ ನೀವು ನಮ್ಮನ್ನು ಉಳಿಸುತ್ತೀರಿ ಎಂದು ನಾವು ನಂಬಿದ್ದೇವೆ.. ವಿದ್ಯಾರ್ಥಿನಿ ವಿಡಿಯೋ ವೈರಲ್​!

ನಮ್ಮವರಿಗೆ ಆದ ಅನ್ಯಾಯವನ್ನು ಎತ್ತಿ ಹಿಡಿಯಬೇಕು. ಆದರೆ, ಘಟನೆಯ ಬಗ್ಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಬೇಕಾದವರು ಈಶ್ವರಪ್ಪ ಅವರನ್ನು ವಜಾ ಮಾಡಬೇಕು ಎಂದು ಪ್ರತಿಭಟನೆ ಮಾಡಿರುವುದು ದುರ್ದೈವ ಎಂದು ಕಿಡಿಕಾರಿದರು.

Last Updated : Feb 28, 2022, 7:14 PM IST

ABOUT THE AUTHOR

...view details