ಕರ್ನಾಟಕ

karnataka

ETV Bharat / state

ಅಕ್ರಮ ಶ್ರೀಗಂಧ ಮರಗಳ ವಶ : ಆರೋಪಿಗಳಿಗಾಗಿ ಹುಡುಕಾಟ - undefined

ಶಿರಸಿಯ ಅರಣ್ಯ ಪ್ರದೇಶವೊಂದರಲ್ಲಿ ಕಳ್ಳರು ಅಕ್ರಮವಾಗಿ ಕತ್ತರಿಸಿಟ್ಟಿದ್ದ ಶ್ರೀಗಂಧದ ಮರಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕಳ್ಳರಿಗಾಗಿ ಹುಡುಕಾಟ

By

Published : Jul 20, 2019, 3:06 AM IST

ಶಿರಸಿ : ಅರಣ್ಯದಲ್ಲಿ ಅಕ್ರಮವಾಗಿ ಕತ್ತರಿಸಿಟ್ಟಿದ್ದ ಶ್ರೀಗಂಧದ ಕಟ್ಟಿಗೆಯನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡ ಘಟನೆ ಉತ್ತರ ಕನ್ನಡದ ಜೊಯಿಡಾ ತಾಲೂಕಿನ ನಾಗೋಡಾದಲ್ಲಿ ನಡೆದಿದೆ.

ಸುಮಾರು 2 ಲಕ್ಷ ರೂ. ಮೌಲ್ಯದ ಗಂಧದ ಕಟ್ಟಿಗೆಯನ್ನು ಜಪ್ತಿ ಮಾಡಲಾಗಿದೆ. ನಾಗೋಡಾ ಅರಣ್ಯದಲ್ಲಿ ಎರಡು ಗಂಧದ ಮರಗಳನ್ನು ಬುಡದ ಸಮೇತ ಕತ್ತರಿಸಿ, ಅಲ್ಲೇ ಒಣಗಲು ಬಿಟ್ಟು ಆರೋಪಿಗಳು ಸ್ಥಳದಿಂದ ತೆರಳಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿ ಕಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.

ಜೊಯಿಡಾ ವಲಯ ಅರಣ್ಯಾಧಿಕಾರಿ ಮಹೀಮ್​ ಜನ್ನು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ.

For All Latest Updates

TAGGED:

ABOUT THE AUTHOR

...view details