ಕರ್ನಾಟಕ

karnataka

By

Published : Nov 28, 2019, 4:41 AM IST

ETV Bharat / state

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ

ಅಕ್ರಮ ಪ್ರವೇಶ ಹಾಗೂ ಜೀವ ಬೆದರಿಕೆ ಸಂಬಂಧಿಸಿದ ಪ್ರಕರಣವೊಂದರ ಆರೋಪ ಸಾಭೀತಾದ ಹಿನ್ನೆಲೆ ಅಂಕೋಲಾ ಮೂಲದ ವ್ಯಕ್ತಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ
ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ

ಕಾರವಾರ : ಅಕ್ರಮ ಪ್ರವೇಶ ಹಾಗೂ ಜೀವ ಬೆದರಿಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ಕಾರವಾರ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪ ಸಾಭೀತಾದ ಹಿನ್ನಲೆಯಲ್ಲಿ ಅಂಕೋಲಾ ಮೂಲದ ವ್ಯಕ್ತಿಗೆ 3 ವರ್ಷ ಜೈಲು ಹಾಗೂ 21 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ತಾಲ್ಲೂಕಿನ ರಾಮನಗುಳಿ ಗ್ರಾಮದ ನಿವಾಸಿ ಗೋವಿಂದ ಚಿಪಾ ಗಾಂವಕರ ಶಿಕ್ಷೆಗೊಳಗಾದ ವ್ಯಕ್ತಿ. 2014ರ ಜುಲೈ 17ರಂದು ಈತ ಬುದ್ದಿಮಾಂದ್ಯ ಬಾಲಕಿಯನ್ನು ಹಿಡಿಯಲು ಯತ್ನಿಸಿದಾಗ ಆಕೆಯನ್ನು ತಪ್ಪಿಸಲು ಬಂದ ಇನ್ನೊಂದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಕುತ್ತಿಗೆ ಹಾಗೂ ಇನ್ನಿತರ ಭಾಗಗಳಿಗೂ ಹಲ್ಲೆ ಮಾಡಿದ್ದ, ಈ ಕುರಿತು ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಗಣೇಶ ಎಂ ಹೆಗಡೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ದಂಡದ ಮೊತ್ತದಲ್ಲಿ 15 ಸಾವಿರ ರೂ ಹಾಗೂ ಕಾನೂನು ಸೇವಾ ಪ್ರಾಧಿಕಾರದಿಂದ 25 ಸಾವಿರ ರೂ ನೀಡುವಂತೆ ಪ್ರಧಾನ ಜಿಲ್ಲಾ ನ್ಯಾಯಾಧೀಶೆ ವಿಪುಲಾ ಎಂ.ಬಿ. ಪೂಜಾರಿ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ನೊಂದ ಬಾಲಕಿ ಪರವಾಗಿ ವಿಶೇಷ ಸರ್ಕಾರಿ ಪೋಕ್ಸೊ ಅಭಿಯೋಜಕರಾದ ಸುಭಾಷ ಪಿ. ಕೈರನ್ನ ವಾದಿಸಿದ್ದರು.

ABOUT THE AUTHOR

...view details