ಕರ್ನಾಟಕ

karnataka

ETV Bharat / state

ನಾಯಕರ ಬದಲಾವಣೆ ಬಗ್ಗೆ ಹೈಕಮಾಂಡ್​ ಜೊತೆ ಸಿದ್ದರಾಮಯ್ಯ ಮಾತಾಡ್ತಾರೆ: ಶಿವಶಂಕರ ರೆಡ್ಡಿ

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಭಾರಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಸಚಿವ ಶಿವಶಂಕರ ರೆಡ್ಡಿ ಹೇಳಿದರು.

By

Published : Jun 19, 2019, 12:01 AM IST

ಎನ್.ಎಚ್.ಶಿವಶಂಕರ ರೆಡ್ಡಿ

ಶಿರಸಿ:ರಾಜ್ಯ ರಾಜಕೀಯದಲ್ಲಿ ಯಾರ್ಯಾರ ಬದಲಾವಣೆ ಆಗಬೇಕು ಎನ್ನುವ ಬಗ್ಗೆ ಹೈಕಮಾಂಡ್ ಜೊತೆ ಮಾತುಕತೆ ನಡೆಸಲು ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ತಿಳಿಸಿದರು.

ಶಿರಸಿಯಲ್ಲಿ ನಡೆದ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಭಾರಿ ಹಿನ್ನೆಡೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಿದ್ರು.

ಶಿವಶಂಕರ ರೆಡ್ಡಿ, ಕೃಷಿ ಸಚಿವ

ಸಂಪುಟ ಪುನಾರಚನೆ ವೇಳೆ ಅನೇಕ ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಅವರಿಗೆ ಅವಕಾಶ ನೀಡಲು ನಾವು ರಾಜೀನಾಮೆ ಕೊಡಬೇಕು ಅಂದ್ರೆ ರಾಜೀನಾಮೆಗೆ ಸಿದ್ಧನಿದ್ದೇನೆ ಎಂದು ಸ್ಪಷ್ಟಪಡಿಸಿದ್ರು.

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಿಂದ ಅನುಕೂಲ ಮತ್ತು ಅನಾನುಕೂಲ ಎರಡೂ ಆಗಿದೆ. ಜೆಡಿಎಸ್ ಸ್ಪರ್ಧಿಸಿದಲ್ಲಿ ಕಾಂಗ್ರೆಸ್ ವೋಟು ಬಿದ್ದಿಲ್ಲ. ಇನ್ನು ಕಾಂಗ್ರೆಸ್ ಸ್ಪರ್ಧಿಸಿದ ಕಡೆಗಳಲ್ಲಿ ಜೆಡಿಎಸ್ ವೋಟುಗಳು ಬಂದಿಲ್ಲ. ಇದರಿಂದ ಎರಡೂ ಪಕ್ಷಗಳಿಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂದು ಸಚಿವರು ವಿಶ್ಲೇಷಿಸಿದರು.

ABOUT THE AUTHOR

...view details