ಭಟ್ಕಳ:ಮಹತೋಬಾರ ಶ್ರೀ ಮುರ್ಡೇಶ್ವರ ದೇವರ ಜಾತ್ರೆ (ರಥೋತ್ಸವ) ನಡೆಯಲಿದೆ. ಜಾತ್ರೆ ಪ್ರಯುಕ್ತ ಪ್ರವಾಸಿಗರ ವಾಹನ ನಿಲ್ಲಿಸುವ ಜಾಗದಲ್ಲಿ ತಾತ್ಕಾಲಿಕ ಮೂಲಸೌಕರ್ಯ ಒದಗಿಸುವ ಕುರಿತು ಸಾರ್ವಜನಿಕರು ಮಾವಳ್ಳಿ-1 ಪಂಚಾಯತ್ ಅಧ್ಯಕ್ಷರಿಗೆ ಹಾಗೂ ಪಿಡಿಒಗೆ ಮನವಿ ಸಲ್ಲಿಸಿದರು.
ವಿಶ್ವ ಪ್ರಸಿದ್ಧ ಪ್ರವಾಸಿಗರ ನೆಚ್ಚಿನ ಕ್ಷೇತ್ರ ಮಹತೋಬಾರ ಶ್ರೀ ಮುರ್ಡೇಶ್ವರ ದೇವರ ಜಾತ್ರೆ ಪ್ರತಿ ವರ್ಷದಂತೆ ನಡೆಯಲಿದೆ. ಬರುವಜನವರಿ 20 ರಂದು ನಡೆಯುವ ಜಾತ್ರೆಯ ಪ್ರಯುಕ್ತ ಗ್ರಾಮ ಪಂಚಾಯತ್ ವತಿಯಿಂದ ಅಂಗಡಿ ಮುಂಗಟ್ಟುಗಳಿಗೆ ಮತ್ತು ಪ್ರವಾಸಿಗರ ವಾಹನ ನಿಲ್ಲಿಸಲು ಪಾರ್ಕಿಂಗ್ ಟೆಂಡರ್ ಕರೆಯಲಾಗುತ್ತದೆ. ಇದರಿಂದ ಗ್ರಾಮ ಪಂಚಾಯತ್ಗೆ ಲಕ್ಷಾಂತರ ರೂ. ಆದಾಯ ಬರುತ್ತದೆ.