ಕಾರವಾರ: ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 35 ಎಕರೆ ಪ್ರದೇಶದ ಬೆಳೆ ಸುಟ್ಟು ಕರಕಲಾದ ಘಟನೆ ಹಳಿಯಾಳ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗುರುನಾಥ ಕಲಕೇರಿ, ಕೃಷ್ಣಾ ಪಾಟೀಲ್ ಹಾಗು ಮಾರುತಿ ಬಾವಕರ್ ಎಂಬ ರೈತರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದೆ. ಗಾಳಿಯ ರಭಸಕ್ಕೆ ಒಂದು ಗದ್ದೆಯಿಂದ ಮತ್ತೊಂದು ಗದ್ದೆಗೆ ಹಬ್ಬಿದ ಬೆಂಕಿ ಕೆನ್ನಾಲಿಗೆ ಹಬ್ಬಿದ್ದು ಅಂದಾಜು 70 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ.