ಕರ್ನಾಟಕ

karnataka

ETV Bharat / state

ಈ ಬಾರಿ ಬಿಜೆಪಿಯ ಹಿಂದುತ್ವ ವರ್ಕೌಟ್ ಆಗಲ್ಲ: ಮಧು ಬಂಗಾರಪ್ಪ

ಹಿಂದುತ್ವದ ಅಜೆಂಡಾ ಇಟ್ಟು ಚುನಾವಣೆಗೆ ಬರುವ ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ ಎಂದು ಮಧು ಬಂಗಾರಪ್ಪ ಹೇಳಿದರು.

By

Published : Dec 28, 2022, 9:26 PM IST

Backward Classes State President Madhu Bangarappa
ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ

ಶಿರಸಿ (ಉತ್ತರ ಕನ್ನಡ) :ರಾಜ್ಯದಲ್ಲಿ ಈ ಸಲ ಬಿಜೆಪಿಯ ಹಿಂದುತ್ವ ಕೆಲಸ ಮಾಡಲ್ಲ. ಜನರಿಗೆ ಸತ್ಯದ ಅರಿವಾಗಿದೆ. ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ಬಂದಾಗ ಬಿಜೆಪಿಗೆ ದುರ್ಬುದ್ಧಿ ಬರುತ್ತದೆ ಎಂದರು.

ಬಿಜೆಪಿಯವರು ಒಳ್ಳೆಯ ಕೆಲಸ ಮಾಡಲು ಆಗದಾಗ ಬೆಂಕಿ ಹಚ್ಚುತ್ತಾರೆ. ಆದರೆ ಈ ಸಲ ಇದ್ಯಾವುದನ್ನೂ ನಂಬುವ ಸ್ಥಿತಿಯಲ್ಲಿ ರಾಜ್ಯದ ಜನರಿಲ್ಲ. ಬಡವರಿಗೆ ಮನೆ ಕಟ್ಟಲು ಯೋಗ್ಯತೆ ಇಲ್ಲದವರು ಹಿಂದುತ್ವದ ಭಾಷಣ ಬಿಗಿಯುತ್ತಾರೆ. ಹಿಂದೂ ಸಮಾಜದಲ್ಲಿ ಹುಟ್ಟಿದ ಸಿದ್ದರಾಮಯ್ಯನವರಿಗೆ ಸಿದ್ರಾಮುಲ್ಲಾ ಖಾನ್ ಎನ್ನುವ ಸಿ.ಟಿ.ರವಿ ಮೊದಲ ಹಿಂದು ವಿರೋಧಿ ಎಂದು ವಾಗ್ದಾಳಿ ನಡೆಸಿದರು.

ಕಲ್ಯಾಣ ಕರ್ನಾಟಕ ಮಾಡಲು ಹೊರಟಿರುವ ಬಿಜೆಪಿ ಸರ್ಕಾರ ಮೊದಲು ರಾಜ್ಯದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು, ಒಂದೇ ಕರ್ನಾಟಕ ಎಂಬ ಕೂಗಿಗೆ ಸ್ಪಂದನೆ ಕೊಡಬೇಕು. ಬಿಜೆಪಿಗರು ಅರಣ್ಯ ಅತಿಕ್ರಮಣದಾರರು ಜಾಮೀನು ಪಡೆದು ತಿರುಗುವಂಥ ಸ್ಥಿತಿ ತಂದಿದ್ದಾರೆ. ಅನ್ನ ಕೊಡುವ ರೈತರನ್ನು ಭೂಗಳ್ಳರಂತೆ ಬಿಂಬಿಸಲಾಗುತ್ತಿದೆ ಎಂದು ಅವರು ಟೀಕಿಸಿದರು.

ಇದನ್ನೂ ಓದಿ :ಬಿಜೆಪಿ ಬದುಕಿದ್ದರೂ ಸತ್ತು ಹೋಗಿದೆ: ಮಧು ಬಂಗಾರಪ್ಪ

ABOUT THE AUTHOR

...view details