ಕರ್ನಾಟಕ

karnataka

By

Published : Jan 21, 2021, 4:31 PM IST

ETV Bharat / state

ಗೋಕರ್ಣ ಬೀಚ್​ನಲ್ಲಿ ಅಲೆಗಳಿಗೆ ಕೊಚ್ಚಿ ಹೋಗಿದ್ದ ಮೂವರು ಸಾವು: ಇಬ್ಬರ ರಕ್ಷಣೆ

ಗೋಕರ್ಣ ಬೀಚ್​ನಲ್ಲಿ ಆಟವಾಡುತ್ತಿದ್ದಾಗ ಅಲೆಗಳಿಗೆ ಕೊಚ್ಚಿ ಹೋಗಿದ್ದ ಐವರು ಪ್ರವಾಸಿಗರ ಪೈಕಿ ಮೂವರು ಸಾವನ್ನಪ್ಪಿದ್ದು, ಇನ್ನಿಬ್ಬರನ್ನು ರಕ್ಷಣೆ ಮಾಡಲಾಗಿದೆ.

Gokarna beach
ಗೋಕರ್ಣ ಬೀಚ್​

ಕಾರವಾರ: ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಲೆಗಳಿಗೆ ಸಿಕ್ಕಿ ಕೊಚ್ಚಿ ಹೋಗಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದು, ಇಬ್ಬರನ್ನು ರಕ್ಷಣೆ ಮಾಡಿರುವ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ಇಂದು ನಡೆದಿದೆ.

ಗೋಕರ್ಣ ಬೀಚ್​ನಲ್ಲಿ ಕೊಚ್ಚಿ ಹೋಗಿದ್ದ ಮೂವರು ಸಾವು

ಬೆಂಗಳೂರಿನ ಹೆಬ್ಬಗೋಡಿ ತಿರುಪಾಲ್ಯದ ಸುಮಾ (21), ತಿಪ್ಪೇಶ್ ನಾಯಕ್ (20) ಮತ್ತು ರವಿ (35) ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಇನ್ನಿಬ್ಬರನ್ನು ರಕ್ಷಣೆ ಮಾಡಿದ್ದು, ಅಸ್ವಸ್ಥಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರು ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದವರಾಗಿದ್ದು, ಸ್ನೇಹಿತರೊಂದಿಗೆ ಪ್ರವಾಸಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಸಮುದ್ರದಲ್ಲಿ ಈಜುತ್ತಿದ್ದಾಗ ಒಮ್ಮೆಲೇ ಬಂದ ಅಲೆ ಐವರನ್ನು ಕೊಚ್ಚಿಕೊಂಡು ಹೋಗಿತ್ತು. ತಕ್ಷಣ ಅಲ್ಲಿಯೇ ಇದ್ದ ಬೋಟಿಂಗ್ ಚಡುವಟಿಕೆ ನಡೆಸುವ ಸಿಬ್ಬಂದಿ ರಕ್ಷಣೆಗೆ ಧಾವಿಸಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಮತ್ತೆ ಮೂವರನ್ನು ದಡಕ್ಕೆ ತಂದರಾದರೂ ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿದ್ದರು.

ಮೂವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details