ಕಾರವಾರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕೂಲಿ ಮಾಡಿಕೊಂಡು ಮನೆಗೆ ಮರಳುತ್ತಿದ್ದ ಕೆಲಸಗಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕುಮಟಾದ ಹಂದಿಗೊಣ ಬಳಿ ನಡೆದಿದೆ.
ಬೈಕ್ ಲಾರಿ ನಡುವೆ ಡಿಕ್ಕಿ: ಕೂಲಿ ಮಾಡಿ ಮರಳುತ್ತಿದ್ದವರ ದಾರುಣ ಸಾವು
ಮಂಗಳೂರು ಕಡೆಯಿಂದ ಅತಿವೇಗವಾಗಿ ಬಂದ ಲಾರಿಯು ಎದುರು ಬರುತ್ತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಪಕ್ಕದಲ್ಲೇ ಇದ್ದ ಕಂದಕಕ್ಕೆ ಬಿದ್ದಿದ್ದಾರೆ.
ಕೂಲಿಯಿಂದ ಮರಳುತ್ತಿದ್ದವರ ದಾರುಣ ಸಾವು
ವಿನೋದ ಲಕ್ಷ್ಮಣ ಮುಕ್ರಿ ಹಾಗೂ ಸದಾನಂದ ನಾರಾಯಣ ಮುಕ್ರಿ ಸಾವಿಗೀಡಾದವರು. ಮಂಗಳೂರು ಕಡೆಯಿಂದ ಅತಿವೇಗವಾಗಿ ಬಂದ ಲಾರಿಯು ಎದುರಿನಿಂದ ಬರುತ್ತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಪಕ್ಕದಲ್ಲೇ ಇದ್ದ ಕಂದಕಕ್ಕೆ ಬಿದ್ದಿದ್ದಾರೆ.
ಅಪಘಾತದ ತೀವ್ರತೆಗೆ ತಲೆ ಹಾಗೂ ಮುಖಕ್ಕೆ ಗಂಭೀರವಾದ ಗಾಯಗಳಾಗಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
ACCIDENT TWO DEATH_