ಶಿರಸಿ: ಕಳೆದ ನಾಲ್ಕು ದಿನಗಳ ಹಿಂದೆ ಯಲ್ಲಾಪುರದ ಮದ್ನೂರು ಗ್ರಾಮ ಪಂಚಾಯತ ಚುನಾವಣೆಯ ಹಿನ್ನೆಲೆಯಲ್ಲಿ, ಕಲಘಟಗಿಯಲ್ಲಿ ನಡೆದ ಮಾರಾಮಾರಿ ಪ್ರಕರಣದಲ್ಲಿ ಯಲ್ಲಾಪುರ ಬಿಜೆಪಿ ಮುಖಂಡ ವಿಜಯ್ ಮಿರಾಶಿಯನ್ನು ಆರೋಪಿಯನ್ನಾಗಿಸಿದ್ದರ ವಿರುದ್ಧ ಅವರ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಯಲ್ಲಾಪುರದ ಕಿರವತ್ತಿಯಲ್ಲಿ ವಿಜಯ್ ಮಿರಾಶಿ ಅಭಿಮಾನಿಗಳಿಂದ ಪ್ರತಿಭಟನೆ ನಡೆದಿದೆ. ಮದ್ನೂರು ಗ್ರಾಮ ಪಂಚಾಯತ್ ನೂತನ ಸದಸ್ಯರ ನಡುವೆ ಇತ್ತೀಚೆಗೆ ಮಾರಾಮಾರಿ ನಡೆದಿತ್ತು. ಧಾರವಾಡದ ಕಲಘಟಗಿಯ ಡಾಬಾದಲ್ಲಿ ಕುಡಿದು ಗಲಾಟೆ ಮಾಡಿಕೊಂಡಿದ್ದರು. ಹೊಡೆದಾಟದಲ್ಲಿ 5ಕ್ಕೂ ಹೆಚ್ಚು ಸದಸ್ಯರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು.