ಕರ್ನಾಟಕ

karnataka

By

Published : May 29, 2020, 7:12 PM IST

ETV Bharat / state

ಆಪರೇಷನ್ ಹಸ್ತ ಮಾಡಲು ನಮ್ಮ ಬಳಿ ಬಿಜೆಪಿಯಷ್ಟು ಹಣವಿಲ್ಲ: ಸತೀಶ್ ಜಾರಕಿಹೊಳಿ ವ್ಯಂಗ್ಯ

ಆಪರೇಷನ್​ ಹಸ್ತ ಮಾಡುವ ಮೂಲಕ ಬಿಜೆಪಿ ಶಾಸಕರನ್ನು ಸೆಳೆದು ಸರ್ಕಾರ ರಚನೆ ಮಾಡಲು ನಮ್ಮ ಬಳಿ ಬಿಜೆಪಿಯಷ್ಟು ಹಣ ಇಲ್ಲ ಎಂದು ಸತೀಶ್​ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.

Satish Jarakiholi
ಸತೀಶ ಜಾರಕಿಹೊಳಿ ವ್ಯಂಗ್ಯ

ಶಿರಸಿ(ಉತ್ತರ ಕನ್ನಡ): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೆಡವಿ ಆಪರೇಷನ್ ಹಸ್ತ ನಡೆಸಲು ನಮ್ಮ ಬಳಿ ಬಿಜೆಪಿಯಷ್ಟು ಹಣವಿಲ್ಲ. ಅದರ ಬದಲಾಗಿ ನಾವು ಚುನಾವಣೆ ಎದುರಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಸತೀಶ ಜಾರಕಿಹೊಳಿ ವ್ಯಂಗ್ಯ

ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮಂತ್ರಿ ಸ್ಥಾನ ನೀಡುವ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದಾಗಿದೆ. ಆದರೆ ಅಲ್ಲಿನ ಭಿನ್ನಾಭಿಪ್ರಾಯ ಬಳಸಿಕೊಂಡು ಸರ್ಕಾರ ಬೀಳಿಸಲು ನಾವು ಹೋಗುವುದಿಲ್ಲ. ಅಷ್ಟು ಹಣವೂ ನಮ್ಮ ಬಳಿ ಇಲ್ಲ. ಅಂತಹ ಸಂದರ್ಭ ಬಂದಲ್ಲಿ ನಾವು ಚುನಾವಣೆ ಎದುರಿಸುತ್ತೇವೆ ಎಂದರು.

ಮುಂದಿನ ತಿಂಗಳು ಕೆಪಿಸಿಸಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದ್ದು, ನಂತರ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ತಿಳಿಸಿದರು.

ABOUT THE AUTHOR

...view details