ಕರ್ನಾಟಕ

karnataka

ETV Bharat / state

ತವರಿಗೆ ಬಂದು ನೇಣಿಗೆ ಶರಣಾದ ಗೃಹಿಣಿ...! - ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ

ಮದುವೆಯಾಗಿ ಕೇವಲ ಒಂದೂವರೆ ವರ್ಷದಲ್ಲೇ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತವರಿನಲ್ಲಿ ಗೃಹಿಣಿ ನೇಣಿಗೆ ಶರಣು

By

Published : Oct 10, 2019, 4:56 AM IST

ಉತ್ತರ ಕನ್ನಡ: ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಟ್ಕಳ ತಾಲೂಕಿನ ಶಿರಾಲಿ ಪಂಚಾಯತ್​ ವ್ಯಾಪ್ತಿಯ ಮಣ್ಣೊಂಡದಲ್ಲಿ ನಡೆದಿದೆ.

ತವರಿನಲ್ಲಿ ನೇಣಿಗೆ ಶರಣಾದ ಗೃಹಿಣಿ

ಆಶಾ ರಾಜೇಶ ನಾಯ್ಕ ಮೃತ ಮಹಿಳೆಯಾಗಿದ್ದು, ಒಂದೂವರೆ ವರ್ಷದ ಹಿಂದೆ ಈಕೆಯ ವಿವಾಹವಾಗಿತ್ತು. ಈಗ ಆಶಾ ತನ್ನ ತವರು ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ.

ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್​ ವಿ.ಪಿ ಕೊಟ್ರಳ್ಳಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details