ಕಾರವಾರ:ಜಿಲ್ಲಾ ಪಂಚಾಯಿತಿ ಉದ್ಯೋಗಿಯೋರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕಾಳಿ ನದಿ ಸೇತುವೆ ಬಳಿ ನಡೆದಿದೆ. ಶ್ರೀಕಾಂತ ಮೇಲಿನಮನೆ (38) ಮೃತ ವ್ಯಕ್ತಿ.
ಮೇಲಾಧಿಕಾರಿ ಕಿರುಕುಳ ಆರೋಪ: ಉತ್ತರ ಕನ್ನಡ ಜಿ ಪಂ ಅಧಿಕಾರಿ ಆತ್ಮಹತ್ಯೆ - ಜಿಲ್ಲಾ ಪಂಚಾಯಿತಿ ಅಧಿಕಾರಿ ಆತ್ಮಹತ್ಯೆ
ನದಿಗೆ ಹಾರಿ ಜಿಲ್ಲಾ ಪಂಚಾಯಿತಿ ಅಧಿಕಾರಿ ಆತ್ಮಹತ್ಯೆ. ಕೆಲಸದ ಒತ್ತಡ ಹಾಗೂ ಮೇಲಾಧಿಕಾರಿಗಳ ಕಿರುಕುಳದಿಂದಾಗಿ ಆತ್ಮಹತ್ಯೆ ಆರೋಪ. ಮೃತನ ತಂದೆಯಿಂದ ದೂರು.

ಕಾರವಾರದಲ್ಲಿ ಜಿಪಂ ಅಧಿಕಾರಿ ಆತ್ಮಹತ್ಯೆ
ಕಾರವಾರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿದ್ದ ಶ್ರೀಕಾಂತ ಕಾಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಧಿಕ ಕೆಲಸದ ಒತ್ತಡ, ಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತಮ್ಮಣ್ಣ ಚನ್ನಬಸಪ್ಪ ಮೇಲಿನಮನೆ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.