ಕರ್ನಾಟಕ

karnataka

ETV Bharat / state

ಅಕ್ಷರ ದಾಸೋಹ ಕಾರ್ಮಿಕರಿಗೆ ಗೌರವಧನ ಪಾವತಿಸುವಂತೆ ಮನವಿ - vijaypur latest news

ಶಾಲೆಗಳಿಗೆ ರಜೆ ಘೋಷಣೆ ಮಾಡಿದ ದಿನದಿಂದ ಅಕ್ಷರ ದಾಸೋಹ ಕಾರ್ಮಿಕರಿಗೆ ಸರಿಯಾಗಿ ಗೌರವಧನ ನೀಡಿಲ್ಲ. ಪುನಃ ಶಾಲೆಗಳು ಆರಂಭವಾಗುವವರೆಗೂ ಕಾರ್ಮಿಕರಿಗೆ ಗೌರವಧನ ಪಾವತಿಸುವಂತೆ ಕೋರಿ ಎಡಿಸಿ ಔದ್ರಾಮ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Akshaya Dasahoa activists
ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘಟನೆ ಮನವಿ

By

Published : May 26, 2020, 1:22 PM IST

ವಿಜಯಪುರ:ಅಕ್ಷರ ದಾಸೋಹ ಕಾರ್ಮಿಕರಿಗೆ ಶಾಲೆಗಳು ಆರಂಭವಾಗುವವರೆಗೂ ಗೌರವಧನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘಟನೆ ಮನವಿ ಸಲ್ಲಿಸಿದೆ.

ಲಾಕ್‌ಡೌನ್ ಜಾರಿಯಿಂದ ‌ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದರಿಂದಾಗಿ ಅಕ್ಷರ ದಾಸೋಹ ಕೆಲಸ ನಂಬಿಕೊಂಡು ಬದಕು ಕಟ್ಟಿಕೊಂಡ ಕಾರ್ಮಿಕರು ಇಂದು ಆರ್ಥಿಕ ಸಂಕಷ್ಟದಲ್ಲಿದ್ದಾರೆ‌‌. ಕಳೆದ ಮೂರು ತಿಂಗಳಿಂದ ಉದ್ಯೋಗವಿಲ್ಲದೆ ಕುಟುಂಬದ ನಿರ್ವಹಣೆ ಮಾಡಲಾಗದೆ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಕಾಲ ಕಾಲಕ್ಕೆ ವೇತನ ನೀಡುತ್ತಿಲ್ಲ ಎಂದು ಅಕ್ಷರ ದಾಸೋಹ ಕಾರ್ಮಿಕ ಸಂಘದ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟರು‌.

ಶಾಲೆಗಳಿಗೆ ರಜೆ ಘೋಷಣೆ ಮಾಡಿದ ದಿನದಿಂದ ಅಕ್ಷರ ದಾಸೋಹ ಕಾರ್ಮಿಕರಿಗೆ ಸರಿಯಾಗಿ ಗೌರವಧನ ನೀಡಿಲ್ಲ. ಪುನಃ ಶಾಲೆಗಳು ಆರಂಭವಾಗುವವರೆಗೂ ಕಾರ್ಮಿಕರಿಗೆ ಗೌರವಧನ ಪಾವತಿಸುವಂತೆ ಕೋರಿ ಎಡಿಸಿ ಔದ್ರಾಮ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details