ವಿಜಯಪುರ:ಪಂಚಮಸಾಲಿ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕೆಂದುಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಪಂಚಮಸಾಲಿ ಸಮುದಾಯದ ಯತ್ನಾಳರಿಗೆ ಸಚಿವ ಸ್ಥಾನ ನೀಡಿ: ಮೃತ್ಯುಂಜಯ ಸ್ವಾಮೀಜಿ ಒತ್ತಾಯ - ಬಸನಗೌಡ ಪಾಟೀಲ ಯತ್ನಾಳ ಅವರು ಕೇವಲ ಪಂಚಮಸಾಲಿ ನಾಯಕರಲ್ಲ
ಪಂಚಮಸಾಲಿ ಸಮುದಾಯದ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
![ಪಂಚಮಸಾಲಿ ಸಮುದಾಯದ ಯತ್ನಾಳರಿಗೆ ಸಚಿವ ಸ್ಥಾನ ನೀಡಿ: ಮೃತ್ಯುಂಜಯ ಸ್ವಾಮೀಜಿ ಒತ್ತಾಯ KN_VJP_01_swamiji_reaction_AVB_KA10027](https://etvbharatimages.akamaized.net/etvbharat/prod-images/768-512-5433913-thumbnail-3x2-bbmp.jpg)
ಸಚಿವ ಸ್ಥಾನ ಹಂಚಿಕೆ ವಿಚಾರವಾಗಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಬಸನಗೌಡ ಪಾಟೀಲ ಯತ್ನಾಳ ಅವರು ಕೇವಲ ಪಂಚಮಸಾಲಿ ನಾಯಕರಲ್ಲ. ಯತ್ನಾಳ ಉತ್ತರ ಕರ್ನಾಟಕದ ಜನರ ಪರವಾಗಿ ನಿಂತಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಬಿ.ಎಸ್.ಯಡಿಯೂರಪ್ಪ ಅವರ ಬೆನ್ನಿಗೆ ನಿಂತವರು ಯತ್ನಾಳ. ಹಾಗಾಗಿ ಸಚಿವ ಸ್ಥಾನ ನೀಡುವುದರಲ್ಲಿ ತಪ್ಪಿಲ್ಲ. ಯತ್ನಾಳ, ಮುರಗೇಶ ನಿರಾಣಿ, ಸಿದ್ದು ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಂಚಮಸಾಲಿ ಜನರ ಅಭಿಪ್ರಾಯವಾಗಿದೆ. ಎಲ್ಲರಿಗೂ ಅವಕಾಶ ಕೊಡಲು ಆಗೋದಿಲ್ಲ. ಪ್ರಯತ್ನಿಸುತ್ತೇನೆ ಎಂದು ಸಿಎಂ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ಸಿಗದಿದ್ರೆ ಪಂಚಮಸಾಲಿ ಸಮಾಜದ ಮುಖಂಡರೊಂದಿಗೆ ಚರ್ಚಿಸಿ ತಿರ್ಮಾನ ಮಾಡಲಾಗುವುದು ಎಂದು ಮೃತ್ಯುಂಜಯ ಸ್ವಾಮೀಜಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.