ಕರ್ನಾಟಕ

karnataka

By

Published : Jul 23, 2020, 3:06 PM IST

ETV Bharat / state

ದಲಿತ ಯುವಕನ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯ

ವಿಜಯಪುರದ ತಾಳಿಕೋಟಿ ತಾಲೂಕಿನಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಭೀಮ್​​ ಆರ್ಮಿ ಸಂಘಟನೆ ಪ್ರತಿಭಟನೆ ನಡೆಸಿತು.

ವಿಜಯಪುರ
ವಿಜಯಪುರ

ವಿಜಯಪುರ: ದಲಿತ ಯುವಕನ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಒತ್ತಾಯಿಸಿ ಭೀಮ್​ ಆರ್ಮಿ ಸಂಘಟನೆ‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು‌.

ತಾಳಿಕೋಟಿ ತಾಲೂಕಿನ‌ ಮಿಣಜನಗಿ ಗ್ರಾಮದ ದಲಿತ ಯುವಕ ಸವರ್ಣೀಯರ ಬೈಕ್ ಮುಟ್ಟಿದ್ದಕ್ಕೆ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ. ಘಟನೆಗೆ ಸಂಬಂಧಿಸಿದಂತೆ 13 ಯುವಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ, ಒಬ್ಬ ವ್ಯಕ್ತಿಯನ್ನು ಮಾತ್ರ ವಿಚಾರಣೆ ನಡೆಸಿ ಕೈ ತೊಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ದಲಿತರ ಮೇಲಿನ ಹಲ್ಲೆ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದ್ದು, ಜಿಲ್ಲಾಡಳಿತ ಅವುಗಳಿಗೆ ಕಡಿವಾಣ ಹಾಕಲು ಮುಂದಾಗಬೇಕು. ಮಿಣಜನಗಿ ಗ್ರಾಮದ ಯುವಕನ ಮೇಲೆ ಹಲ್ಲೆ ನಡೆದು ವಾರ ಕಳೆಯುತ್ತಾ ಬಂದರೂ ಆರೋಪಿಗಳ ಬಂಧನ ಮಾಡದಿರೋದಕ್ಕೆ ಪ್ರತಿಭಟನಾಕಾರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಸವರ್ಣೀಯರು ಕಾನೂನಿನ ಭಯವಿಲ್ಲದೆ ಪದೇ ಪದೆ ದಲಿತರ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದು, ಜಿಲ್ಲಾಡಳಿತ ಅಂತವರಿಗೆ ತಕ್ಕ ಪಾಠ ಕಲಿಸುವಂತೆ ಪ್ರತಿಭಟನಾಕಾರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details