ಕರ್ನಾಟಕ

karnataka

ETV Bharat / state

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಅರುಣ್​ ಸಿಂಗ್ - ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆ

ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದರ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡಲಿದೆ. ಬಿಜೆಪಿ 18 ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದೆ. ಎಲ್ಲ ರಾಜ್ಯದ ಚುನಾವಣೆಯಲ್ಲೂ ಬಿಜೆಪಿ ಗೆಲುವು ದಾಖಲಿಸುತ್ತಿದೆ ಎಂದು ಅರುಣ್​ ಸಿಂಗ್​ ಹೇಳಿದ್ದಾರೆ.

ಅರುಣಸಿಂಗ್
ಅರುಣಸಿಂಗ್

By

Published : Nov 8, 2022, 7:46 PM IST

Updated : Nov 8, 2022, 8:01 PM IST

ವಿಜಯಪುರ:ಕಾಂಗ್ರೆಸ್ ದೇಶದಲ್ಲಿ ಅಧಃಪತನ ಕಾಣುತ್ತಿದೆ. ಇದೇ ಕಾರಣಕ್ಕೆ ದೇಶದಲ್ಲಿ ಕೇವಲ 2 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಂಡಿದೆ. ಬಿಜೆಪಿ 18 ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದೆ. ಎಲ್ಲ ರಾಜ್ಯದ ಚುನಾವಣೆಯಲ್ಲೂ ಬಿಜೆಪಿ ಗೆಲುವು ದಾಖಲಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದರ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಹೇಳಿದರು.

ಇಂಡಿ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿಗೆ ಗೆಲುವಿನ ಟ್ರೆಂಡ್ ಇದೆ. ಕಾಂಗ್ರೆಸ್​ಗೆ ಸೋಲಿನ ಟ್ರೆಂಡ್ ಇದೆ. 224 ವಿಧಾನಸಭೆ ಸದಸ್ಯರಲ್ಲಿ ಇಂಡಿ ಮತಕ್ಷೇತ್ರ ದಿಂದ ಒಬ್ಬ ಬಿಜೆಪಿ ಶಾಸಕರು ಇರಬೇಕು. ತಾವು ಎಲ್ಲರೂ ಕೈ ಜೋಡಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್

ಜಾರಕಿಹೊಳಿಗೆ ತಿರುಗೇಟು:ಸತೀಶ್​ ಜಾರಕಿಹೊಳಿಯವರೇ ಹಿಂದೂ ಎಂದರೆ ಏನು ಎಂದು ನಿಮಗೆ ಜನ್ಮ ನೀಡಿದವರಿಗೆ ಕೇಳಿ. ಗೂಗಲ್ ಕೇವಲ 10 ವರ್ಷಗಳ ಕೆಳಗೆ ಬಂದಿದ್ದು. ನಾವು ಅದರಲ್ಲಿ ಏನು ಬರೆಯುತ್ತೇವೆ ಅದನ್ನೇ ಹೇಳುತ್ತದೆ. ಎಲ್ಲ ಕಾಂಗ್ರೆಸ್ ನಾಯಕರು ಹಿಂದೂಗಳನ್ನು ಟೀಕೆ ಮಾಡುತ್ತಾರೆ.

ಸಿದ್ದರಾಮಯ್ಯ ಸರ್ಕಾರ ಇತ್ತು ಆವಾಗ ಗೋ ಹತ್ಯೆ, ಹಿಂದೂಗಳ ಹತ್ಯೆಯಾಗುತ್ತಿತ್ತು. ಯಡಿಯೂರಪ್ಪ ಸರ್ಕಾರ ಬಂದ ಮೇಲೆ ನಾವು ಗೋ ಹತ್ಯೆ ತಡೆ ಹಾಕಿದೆವು ಎಂದು ಅರುನ್​ ಸಿಂಗ್ ತಿರುಗೇಟು ನೀಡಿದರು.

ಇದನ್ನೂ ಓದಿ:ಚುನಾವಣೆಯಲ್ಲಿ ಜನರು ಪಕ್ಷ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದಾರೆ: ಸಿಎಂ ಬೊಮ್ಮಾಯಿ

Last Updated : Nov 8, 2022, 8:01 PM IST

ABOUT THE AUTHOR

...view details