ಕರ್ನಾಟಕ

karnataka

ETV Bharat / state

ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ: ಸಚಿವ ಎಸ್.ಟಿ.ಸೋಮಶೇಖರ್​

ಮುಖ್ಯಮಂತ್ರಿಗಳು ಈಗಾಗಲೇ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದಾರೆ. ಇದರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ, ಯಾರಿಗೆ ಇಲ್ಲ ಎನ್ನುವದು ಅವರಿಗೆ ಬಿಟ್ಟ ವಿಚಾರ ಎಂದು ಸಚಿವ ಎಸ್.ಟಿ.ಸೋಮಶೇಖರ್​ ಹೇಳಿದರು.

By

Published : Nov 20, 2020, 4:35 PM IST

Minister ST Somashekar
ಸಚಿವ ಎಸ್.ಟಿ.ಸೋಮಶೇಖರ

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಅವರು ಸಂಪುಟ ವಿಸ್ತರಣೆ ಮಾಡುತ್ತಾರೋ ಅಥವಾ ಪುನಾರಚನೆ ಮಾಡುತ್ತಾರೋ ಅದು ಅವರಿಗೆ ಬಿಟ್ಟ ವಿಚಾರ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್​​ ಪ್ರತಿಕ್ರಿಯೆ ನೀಡಿದರು.

ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ: ಸಚಿವ ಎಸ್.ಟಿ.ಸೋಮಶೇಖರ್​

ವಿಜಯಪುರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈಗಾಗಲೇ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದಾರೆ. ಎರಡ್ಮೂರು ದಿನದಲ್ಲಿ ಪ್ರತಿಕ್ರಿಯೆ ಬರಲಿದೆ ಎಂದು ತಿಳಿಸಿದ್ದಾರೆ ಎಂದರು. ಇದರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ, ಯಾರಿಗೆ ಇಲ್ಲ ಎನ್ನುವದು ಅವರಿಗೆ ಬಿಟ್ಟ ವಿಚಾರ ಎಂದರು.

ಬಿಜೆಪಿಯಲ್ಲಿ ಇರೋದು ಒಂದೇ ಮನೆ‌. ಬಿಜೆಪಿ ಮೂರು ಮನೆಯಲ್ಲ, ಒಂದೇ ಮನೆ. ಅದು ಸಿಎಂ ಬಿಎಸ್​ವೈ ಹಾಗೂ ಅಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಅವರದ್ದೇ ಅಂತಿಮ ಎಂದರು. ಕೆಲವರು ನಾನು ಲೀಡರ್, ನಾನು ಲೀಡರ್ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಅಷ್ಟೇ ಎಂದು ವ್ಯಂಗ್ಯವಾಡಿದರು.

ABOUT THE AUTHOR

...view details