ಕರ್ನಾಟಕ

karnataka

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ಡೀಸೆಲ್, ಪೆಟ್ರೋಲ್ ಬೆಲೆ‌ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಿದ್ರೂ ಕೇಂದ್ರ ಸರ್ಕಾರ ಮಾತ್ರ ಇಂಧನ ಬೆಲೆ ಹೆಚ್ಚಿಸುತ್ತಿದೆ..

By

Published : Jun 29, 2020, 3:14 PM IST

Published : Jun 29, 2020, 3:14 PM IST

Congress Activists Protest
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಿನದಿಂದ ದಿನಕ್ಕೆ ಡೀಸೆಲ್, ಪೆಟ್ರೋಲ್ ಬೆಲೆ‌ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಕಡಿಮೆಯಿದ್ರೂ ಕೇಂದ್ರ ಸರ್ಕಾರ ಮಾತ್ರ ತೈಲ ಬೆಲೆ ಹೆಚ್ಚಿಸುತ್ತಿದೆ ಎಂದು ಆರೋಪಿಸಿದರು.
ಕೊರೊನಾ ಲಾಕ್​ಡೌನ್​ನಿಂದ ಜನರು ತತ್ತರಿಸಿದ್ದಾರೆ‌. ಜೀವನ ನಡೆಸಲು ಆಗುತ್ತಿಲ್ಲ. ಈ ಸಂದರ್ಭದಲ್ಲಿ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಕೇಂದ್ರ ಬಿಜೆಪಿ ಸರ್ಕಾರ ಅಭಿವೃದ್ಧಿಯ ಆಡಳಿತ ನೀಡಲು ವಿಫಲವಾಗಿದೆ. ಸುಳ್ಳು ಭರವಸೆಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ.
ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಡಿಮೆ‌ ಬೆಲೆ ಮಾರಾಟವಾಗುವ ಪೆಟ್ರೋಲ್, ಡೀಸೆಲ್ ಬೆಲೆಗಳ ಅನುಗುಣವಾಗಿ ದೇಶದಲ್ಲಿ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ‌ ಕಾರ್ಯಕರ್ತರು ಮನವಿ ಸಲ್ಲಿಸಿದರು.

ABOUT THE AUTHOR

...view details