ವಿಜಯಪುರ: ಜಿಲ್ಲೆಯಲ್ಲಿ ಕರ್ತವ್ಯನಿರತ ಇಬ್ಬರು ಆಶಾ ಕಾರ್ಯಕರ್ತೆಯರು ಮತ್ತು ಓರ್ವ ಅಂಗನವಾಡಿ ಕಾರ್ಯಕರ್ತೆಗೆ ಕೊರೊನಾ ಸೋಂಕು ದೃಢಪಟ್ಟಿದೆ.
ವಿಜಯಪುರದಲ್ಲಿ ಮೂವರು ಕೊರೊನಾ ವಾರಿಯರ್ಸ್ಗೆ ತಗುಲಿದ ಮಹಾಮಾರಿ! - District Collector YS Patila
ವಿಜಯಪುರ ಜಿಲ್ಲೆಯಲ್ಲಿ ಕರ್ತವ್ಯನಿರತ ಇಬ್ಬರು ಆಶಾ ಕಾರ್ಯಕರ್ತೆಯರು ಮತ್ತು ಓರ್ವ ಅಂಗನವಾಡಿ ಕಾರ್ಯಕರ್ತೆಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
![ವಿಜಯಪುರದಲ್ಲಿ ಮೂವರು ಕೊರೊನಾ ವಾರಿಯರ್ಸ್ಗೆ ತಗುಲಿದ ಮಹಾಮಾರಿ! Corona Positive to Three Corona Warriors in Vijayapura](https://etvbharatimages.akamaized.net/etvbharat/prod-images/768-512-7493621-83-7493621-1591368661942.jpg)
ಇಬ್ಬರು ಆಶಾ ಕಾರ್ಯಕರ್ತೆಯರು ಕಂಟೈನ್ಮೆಂಟ್ ಏರಿಯಾದಲ್ಲಿ ಕೆಲಸ ಮಾಡಿದ್ದು, ಅಂಗನವಾಡಿ ಸೂಪರ್ವೈಸರ್ ಕಂಟೈನ್ಮೆಂಟ್ ಏರಿಯಾದಲ್ಲಿ ವಾಸಿಸುತ್ತಿದ್ದರು. ಈ ಮೂವರಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಆದರೆ ಕಂಟೈನ್ಮೆಂಟ್ ಏರಿಯಾದಲ್ಲಿನ ಜನರ ಆರೋಗ್ಯ ತಪಾಸಣೆ ಮಾಡಿದ್ದರು. ಇದರಿಂದ ಸೋಂಕು ಹರಡಿರಬಹುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಹನ್ನೊಂದು ಮಂದಿ ಸೋಂಕಿತರು ಗುಣಮುಖ: ಜಿಲ್ಲೆಯಲ್ಲಿ ಇಂದು ಮೂವರು ಬಾಲಕರು, ಓರ್ವ ಬಾಲಕಿ, 3 ಮಹಿಳೆಯರು, 3 ಪುರುಷರು, ಓರ್ವ ಯುವಕ ಸೇರಿ ಒಟ್ಟು 11 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.