ವಿಜಯಪುರ: ಮಗ ಹಾಗೂ ಮಗಳ ಮದುವೆಯನ್ನು ಒಂದೇ ಬಾರಿಗೆ ನಿಶ್ಚಯಿಸಿದ್ದು, ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಬೈಕ್ನಲ್ಲಿ ಹೋಗುತ್ತಿದ್ದ ದಂಪತಿಗೆ ಸಿಡಿಲು ಬಡಿದು ತೀವ್ರ ಗಾಯಗಳಾದ ಘಟನೆ ವಿಜಯಪುರ ತಾಲೂಕಿನ ಡೋಣಿ ನದಿ ಬಳಿ ಇರುವ ಹಳ್ಳಿ ಕ್ರಾಸ್ ಬಳಿ ಸಂಜೆ ನಡೆದಿದೆ.
ಬೈಕ್ ಮೇಲೆ ವಿಜಯಪುರಕ್ಕೆ ಬರುವಾಗ ಈ ಅವಘಡ ಸಂಭವಿಸಿದೆ. ವಿಜಯಪುರ ನಿವಾಸಿಗಳಾದ ಶರಣಯ್ಯ ಸಂಗಮದ(45) ಹಾಗೂ ಪತ್ಮಿ ಕವಿತಾ ಸಂಗಮದ(40) ಗಾಯಗೊಂಡ ದಂಪತಿ. ಇವರನ್ನು ವಿಜಯಪುರದ ಭಾಗ್ಯವಂತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.