ವಿಜಯಪುರ: 2020-21ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ರೈತರಿಂದ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಲು ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ 9 ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಅವರು ಈಗಾಗಲೇ 8 ಸಕ್ಕರೆ ಕಾರ್ಖಾನೆಗಳ ಮೂಲಕ ಈ ಹಿಂದಿನ ಎಲ್ಲಾ ಬಾಕಿ ಬಿಲ್ ಸಂದಾಯವಾಗಿದ್ದು, ಮುಂದಿನ ಹಂಗಾಮಿನಲ್ಲಿ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಮಧ್ಯೆ ಸಮನ್ವಯತೆ ಇರಲು ರೈತರಿಗೆ ಸಂದಾಯ ಮಾಡಲಾದ ಕಬ್ಬಿನ ಬಿಲ್ ಜಮೆಯ ಬ್ಯಾಂಕ್ ಸ್ಟೇಟಮೆಂಟ್ ಕಡ್ಡಾಯವಾಗಿ ಸಲ್ಲಿಸುವಂತೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರಿಗೆ ತಾಕೀತು ಮಾಡಿದರು.