ಕರ್ನಾಟಕ

karnataka

ETV Bharat / state

ಕೋವಿಡ್​ ಲಕ್ಷಣ ಇದ್ದರೆ ತಕ್ಷಣ ಸಹಾಯವಾಣಿಗೆ ಕರೆ ಮಾಡುವಂತೆ ಡಿಸಿ ಮನವಿ - Vijapura corona

ಜಿಲ್ಲೆಯಲ್ಲಿ ಯಾರಿಗಾದರೂ ಕೋವಿಡ್​-19 ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆ 1077ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

YS Patil
YS Patil

By

Published : Jun 18, 2020, 8:29 PM IST

ವಿಜಯಪುರ:ಜಿಲ್ಲೆಯಲ್ಲಿ ಯಾರಾದರು ನೆಗಡಿ, ಕೆಮ್ಮು, ಜ್ವರ ಮತ್ತು ತೀವ್ರ ಉಸಿರಾಟ ತೊಂದರೆಗಳಂತಹ ಲಕ್ಷಣಗಳಿಂದ ಬಳಲುತ್ತಿದ್ದಲ್ಲಿ ಸ್ವಯಂ ಪ್ರೇರಣೆಯಿಂದ ಹಾಗೂ ಇಂತಹ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣ ಸಹಾಯವಾಣಿ ಸಂಖ್ಯೆ 1077ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮನವಿ ಮಾಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ನೆಗಡಿ, ಕೆಮ್ಮು, ಜ್ವರ ಮತ್ತು ತೀವ್ರ ಉಸಿರಾಟ ತೊಂದರೆಗಳಿಂದ ಬಳಲುತ್ತಿರುವವರ ಗಂಟಲು ಸ್ವ್ಯಾಬ್ (ಗಂಟಲು ದ್ರವ ಮಾದರಿ) ಅನ್ನು ಮಹಾನಗರ ಪಾಲಿಪಪಕೆ ವ್ಯಾಪ್ತಿಯ ನಾಗರಿಕರಿಗೆ ಸಂಬಂಧಪಟ್ಟಂತೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಮತ್ತು ಆಯಾ ತಾಲೂಕುಗಳ ನಾಗರಿಕರಿಗೆ ಸಂಬಂಧಿಸಿ ದಂತೆ ಆಯಾ ತಾಲೂಕಾ ಆಸ್ಪತ್ರೆಗಳಲ್ಲಿ ಮತ್ತು ಎಲ್ಲ ಸಮುದಾಯ ಆರೋಗ್ಯ ಕೇಂದ್ರ (ಸಿಎಚ್​ಸಿ) ಗಳಲ್ಲಿ ಉಚಿತವಾಗಿ ಗಂಟಲು ಸ್ವ್ಯಾಬ್ ಪಡೆಯುವುವ ವ್ಯವಸ್ಥೆ ಮಾಡಲಾಗಿದ್ದು, ಮೇಲ್ಕಂಡ ಲಕ್ಷಣವುಳ್ಳವರು ತಕ್ಷಣ ಇಲ್ಲಿ ಸಂಪರ್ಕಿಸಲು ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಾದ ಇಂಡಿ ತಾಲೂಕಿಗೆ ಸಂಬಂಧಪಟ್ಟಂತೆ ಚಡಚಣ ಮತ್ತು ತಡವಲಗಾ ಸಿಎಚ್​ಸಿ ಸಿಂದಗಿ ತಾಲೂಕಿಗೆ ಸಂಬಂಧಪಟ್ಟಂತೆ ಆಲಮೇಲ ಹಾಗೂ ಮೋರಟಗಿ ಹಾಗೂ ಬಾಗೇವಾಡಿ ತಾಲೂಕಿಗೆ ಸಂಬಂಧಪಟ್ಟಂತೆ ನಿಡಗುಂದಿ ಸಿಎಚ್​ಸಿ ಮುದ್ದೇಬಿಹಾಳ ತಾಲೂಕಿಗೆ ಸಂಬಂಧಪಟ್ಟಂತೆ ತಾಳಿಕೋಟೆ ಮತ್ತು ನಾಲತವಾಡ ಸಿಎಚ್​ಸಿ ಗಳಿಗೆ ಸಂಪರ್ಕಿಸಿ ಗಂಟಲು ಸ್ವ್ಯಾಬ್ ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಇಂತಹ ಲಕ್ಷಣವುಳ್ಳವರ ಬಗ್ಗೆ ಯಾವುದೇ ರೀತಿಯ ಮಾಹಿತಿ ಅಥವಾ ದೂರು ನೀಡಬಯಸಿದ್ದಲ್ಲಿ ಅಧಿಕೃತ ಮಾಹಿತಿಯನ್ನು ಮಾತ್ರ ಸಹಾಯವಾಣಿ ಸಂಖ್ಯೆ 1077ಗೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ನೀಡಬಹುದಾಗಿದೆ.

ಕೋವಿಡ್-19 ನಿಯಂತ್ರಣದ ಸದುದ್ದೇಶದಿಂದ ಈ ಸೌಲಭ್ಯ ಕಲ್ಪಿಸಿದ್ದು, ಯಾರಾದರು ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ಸಹ ದಾಖಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details