ಕರ್ನಾಟಕ

karnataka

ETV Bharat / state

ಯಾವುದೇ ರಾಜ್ಯಗಳು ನೀಡದೇ ಇರುವ ಪ್ಯಾಕೇಜ್‍ ಬಿಎಸ್​ವೈ ನೀಡಿದ್ದಾರೆ: ಡಿಸಿಎಂ ಗೋವಿಂದ ಕಾರಜೋಳ - dcm govida karajola statement in vijayapur

ಕೊರೊನಾದಿಂದ ಸಂಕಷ್ಟಕ್ಕೀಡಾದ ಜನರಿಗೆ ಸಹಾಯವಾಗಲೆಂದು ಸಿಎಂ ಬಿಎಸ್​​ವೈ 2,300 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ದೇಶದ ಯಾವುದೇ ರಾಜ್ಯಗಳು ನೀಡದೇ ಇರುವ ಪ್ಯಾಕೇಜ್‍ಅನ್ನು ರಾಜ್ಯ ಸರ್ಕಾರ ನೀಡಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

dcm govida karajola statement
ಡಿಸಿಎಂ ಗೋವಿಂದ ಕಾರಜೋಳ

By

Published : May 19, 2020, 10:18 AM IST

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪನವರು ಕೊರೊನಾದಿಂದ ಸಂಕಷ್ಟಕ್ಕೀಡಾದ ಜನರಿಗೆ ಸಹಾಯವಾಗಲೆಂದು 2,300 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ದೇಶದ ಯಾವುದೇ ರಾಜ್ಯಗಳು ನೀಡದೇ ಇರುವ ಪ್ಯಾಕೇಜ್‍ಅನ್ನು ರಾಜ್ಯ ಸರ್ಕಾರ ನೀಡಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಸಂಕಷ್ಟಕ್ಕೆ ಒಳಗಾದ ರಸ್ತೆ ಬದಿ ವ್ಯಾಪಾರಸ್ಥರು, ಕ್ಷೌರಿಕರು, ಅಗಸರು, ಟ್ಯಾಕ್ಸಿ ಹಾಗೂ ಆಟೋ ಚಾಲಕರು ಮತ್ತು ಚರ್ಮೋದ್ಯೋಗ ಮಾಡುವ 11,770 ಜನರಿಗೆ ಪ್ರತಿ ಕುಟುಂಬಕ್ಕೆ 5 ಸಾವಿರ ರೂ.ಗಳಂತೆ ಪರಿಹಾರ ನೀಡಲಾಗಿದೆ ಎಂದರು.

ಕಳೆದೆರಡು ತಿಂಗಳ ರೇಷನ್ ನೀಡಲಾಗಿದ್ದರೂ ಕೂಡ ಉದ್ಯೋಗವಿಲ್ಲದೆ ಸಂಕಷ್ಟಕ್ಕೀಡಾಗಿರುವ ಕಾರಣ ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಒಟ್ಟು 7 ಲಕ್ಷದ 75 ಸಾವಿರ, 2 ಲಕ್ಷ 90 ಸಾವಿರ ಕ್ಷೌರಿಕರಿಗೆ ಹಾಗೂ 60 ಸಾವಿರ ಅಗಸರಿಗೆ ಕೊಡಲಾಗಿದೆ ಎಂದರು. ಹಣ್ಣು, ತರಕಾರಿ ಬೆಳೆಯುವ ರೈತರಿಗೆ ತಲಾ 15 ಸಾವಿರ ರೂ. ಕೊಡಲಾಗಿದೆ. ವಿಜಯಪುರ ಒಂದರಲ್ಲೇ ರಸ್ತೆ ಬದಿ ಕಾರ್ಯನಿರ್ವಹಿಸುವ 438 ಚಮ್ಮಾರರಿಗೆ ತಲಾ 5,000 ರೂ. ಪರಿಹಾರ ನೀಡಲಾಗಿದೆ ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

ಪ್ರಧಾನಮಂತ್ರಿಗಳು ಎರಡು ತಿಂಗಳ ಪಡಿತರ, ಜನ್​ಧನ್ ಖಾತೆಗೆ ಹಣ ಜಮೆ, ಸುಮಾರು 8 ಕೋಟಿ ಫಲಾನುಭವಿಗಳಿಗೆ 3 ತಿಂಗಳ ಉಚಿತ ಸಿಲಿಂಡರ್ ನೀಡಿದ್ದು, ರಾಜ್ಯ ಸರ್ಕಾರದ ಅನಿಲ ಭಾಗ್ಯ ಯೋಜನೆ ಫಲಾನುಭವಿಗಳಿಗೆ ತಲಾ 3 ಸಿಲಿಂಡರ್​ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಾರ್ಮಿಕರಿಗೆ, ನಿರ್ಗತಿಕರಿಗೆ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಿದ್ದು, ಇದರ ಜೊತೆಗೆ ಜಿಲ್ಲೆಯಲ್ಲಿ ಒಟ್ಟು 2,144 ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಊಟ, ವಸತಿ ಸೌಲಭ್ಯದ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್-19 ಸಾಂಕ್ರಾಮಿಕ ರೋಗ ಎದುರಿಸಲು ಅನೇಕ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಕೆಲವು ನಿಬಂಧನೆಗಳನ್ನು ಹಾಕಲಾಗಿದೆ. ಸಾರ್ವಜನಿಕರು ಅದನ್ನು ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ರೋಗಿಗಳಿಗೆ ಅಂತಃಕರಣದಿಂದ ನೋಡಬೇಕು. ಅವರ ಆರೋಗ್ಯಕ್ಕೆ ಸಹಾಯವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು. ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗೆ ಸಹಕರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ABOUT THE AUTHOR

...view details