ಮುದ್ದೇಬಿಹಾಳ ರಾಜ್ಯದಲ್ಲಿರುವ ಮರಾಠರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗಿದೆಯೇ ಹೊರತು ಮರಾಠಿ ಅಭಿವೃದ್ಧಿ ನಿಗಮವಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಛತ್ರಪತಿ ಶಿವಾಜಿ ಕರ್ನಾಟಕದವರು, ಮರಾಠರು ನಮ್ಮ ಅಣ್ಣ-ತಮ್ಮಂದಿರು: ಡಿಸಿಎಂ ಕಾರಜೋಳ - ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಸಿಎಂ ಗೋವಿಂದ ಕಾರಜೋಳ
ಛತ್ರಪತಿ ಶಿವಾಜಿ ಅವರು ಕರ್ನಾಟಕದವರು. ಅವರ ಮೂಲ ಪುರುಷರು ಕರ್ನಾಟಕ ಭಾಗದವರೇ ಆಗಿದ್ದಾರೆ. ಮರಾಠಾರು ನಮ್ಮ ಅಣ್ಣ-ತಮ್ಮಂದಿರು ಆಗಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಡಿಸಿಎಂ ಗೋವಿಂದ ಕಾರಜೋಳ ಸಮರ್ಥಿಸಿಕೊಂಡಿದ್ದಾರೆ.
![ಛತ್ರಪತಿ ಶಿವಾಜಿ ಕರ್ನಾಟಕದವರು, ಮರಾಠರು ನಮ್ಮ ಅಣ್ಣ-ತಮ್ಮಂದಿರು: ಡಿಸಿಎಂ ಕಾರಜೋಳ DCM Govinda Karajola news conference in Muddebihal](https://etvbharatimages.akamaized.net/etvbharat/prod-images/768-512-9624578-564-9624578-1606031122743.jpg)
ಪಟ್ಟಣದಲ್ಲಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ನಿವಾಸದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಅವರು ಕರ್ನಾಟಕದವರು. ಅವರ ಮೂಲ ಪುರುಷರು ಕರ್ನಾಟಕ ಭಾಗದವರೇ ಆಗಿದ್ದಾರೆ. ಮರಾಠರು ನಮ್ಮ ಅಣ್ಣ-ತಮ್ಮಂದಿರು ಆಗಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಇತಿಹಾಸ ಗೊತ್ತಿಲ್ಲದವರು ಏನೇನೋ ಹೇಳುತ್ತಾರೆ ಎಂದರೆ ಅದಕ್ಕೆ ಕಿವಿಗೊಡುವುದು ಬೇಡ ಎಂದರು.
ಕೇಂದ್ರ ಸರ್ಕಾರದಿಂದ 577 ಕೋಟಿ ರೂ.ಪರಿಹಾರ ಬಿಡುಗಡೆ: ಅತೀವೃಷ್ಟಿ, ಅನಾವೃಷ್ಟಿಯಿಂದ ಆದ ಹಾನಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಈ ವರ್ಷ 577 ಕೋಟಿ ರೂ. ಪರಿಹಾರ ಧನ ಬಿಡುಗಡೆ ಮಾಡಿದೆ ಎಂದು ಕಾರಜೋಳ ಹೇಳಿದರು. ಈ ವೇಳೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಮುಖಂಡರಾದ ಎಂ.ಎಸ್. ಪಾಟೀಲ, ಮಲಕೇಂದ್ರಗೌಡ ಪಾಟೀಲ, ಹೇಮರಡ್ಡಿ ಮೇಟಿ ಇತರರು ಇದ್ದರು.