ಕರ್ನಾಟಕ

karnataka

ETV Bharat / state

ಏರ್​ಪೋರ್ಟ್ ಕಾಮಗಾರಿ ವೀಕ್ಷಿಸಿದ ಡಿಸಿಎಂ ಕಾರಜೋಳ

ವಿಜಯಪುರ ಜಿಲ್ಲೆಯಲ್ಲಿ ಆರಂಭಗೊಂಡಿರುವ ವಿಮಾನ ನಿಲ್ದಾಣದ ಮೊದಲನೇ ಹಂತದ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವೀಕ್ಷಿಸಿದರು.

By

Published : May 14, 2021, 10:22 PM IST

airport
airport

ವಿಜಯಪುರ: ಮದಬಾವಿ - ಬುರಣಾಪುರ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಪ್ರಥಮ ಹಂತದ ಕಾಮಗಾರಿ ವೇಗವಾಗಿ ನಡೆಯುತ್ತಿವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ವಿಮಾನ ನಿಲ್ದಾಣ ಕಾಮಗಾರಿ ಮೊದಲ ಹಂತದ ಕಾಮಗಾರಿ ಪರಿಶೀಲಿಸಿದ ಅವರು , ಈ ಕಾಮಗಾರಿ ವೇಗವಾಗಿ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಶೀಘ್ರದಲ್ಲಿ ಟೆಂಡರ್​ ಕರೆಯುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವಿಶೇಷವಾದ ಟರ್ಮಿನಲ್ ಕಟ್ಟಡ ನಕಾಶೆ ಸಿದ್ಧಪಡಿಸಿ ಟೆಂಡರ್​ ಕರೆಯುವ ಬಗ್ಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಲೋಕೋಪಯೋಗಿ ಇಲಾಖೆ ಮುಖ್ಯ ಅಭಿಯಂತರ ಎಸ್​ ಎಫ್ ಪಾಟೀಲ್ ಹಾಗೂ ಅಧೀಕ್ಷಕ ಅಭಿಯಂತರ ಬಿ ಪವಾರ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಮಜುಂದಾರ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details