ಕರ್ನಾಟಕ

karnataka

By

Published : Jul 15, 2021, 4:30 PM IST

ETV Bharat / state

ವಿವಾಹೇತರ ಸಂಬಂಧ ಶಂಕೆ: ವಿಜಯಪುರದಲ್ಲಿ ಯುವಕನ ಕೊಂದು ಬೆಂಕಿ ಇಟ್ಟ ಕಿರಾತಕರು

ಯುವಕನೊರ್ವನನ್ನು ಬರ್ಬರವಾಗಿ ಹತ್ಯೆಗೈದು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಭಯಾನಕ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಈ ಪ್ರಕರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.

dead-body-found-in-umadi-outskirts
ಯುವಕನ ಹತ್ಯೆ

ವಿಜಯಪುರ: ಬೆಚ್ಚಿಬೀಳಿಸುವ ಮತ್ತೊಂದು ಘಟನೆಗೆ ವಿಜಯಪುರ ಜಿಲ್ಲೆ ಸಾಕ್ಷಿಯಾಗಿದೆ. ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಯುವಕನೊರ್ವನನ್ನು ಹತ್ಯೆಗೈದು ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಭೀಕರ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಉಮದಿ ರಸ್ತೆಯ ಹೊರವಲಯದಲ್ಲಿ ನಡೆದಿದೆ.

ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ನಿವಾಸಿ ಅರವಿಂದ ಮಲ್ಲಣ್ಣ ದ್ಯಾಪುರ ಹತ್ಯೆಗೀಡಾಗಿರುವ ಯುವಕ. ಮೃತ ಯುವಕನು ಯುವತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಹಿನ್ನೆಲೆ ಆಕೆಯ ಕುಟುಂಬಸ್ಥರು ಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details