ಕರ್ನಾಟಕ

karnataka

ETV Bharat / state

ಯುವಕನ ಮೇಲೆ ಗುಂಡು ಹಾರಿಸಿದ ಆರೋಪಿಗಳ ಬಂಧನ - ವಿಜಯಪುರ ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣ

ಬಾಗಪ್ಪ ಹರಿಜನನಿಂದ ಆರೋಪಿ ತುಳಸಿ ಪ್ರೇರಣೆಗೊಳಗಾಗಿ, ಡಿಜೆ ಬಾಯ್ಸ್ ಹಾಗೂ ಡಿಜೆ ಸರ್ಕಾರ ಎಂಬ ವಾಟ್ಸಪ್ ಗ್ರೂಪ್ ಕೂಡ ಕ್ರಿಯೇಟ್ ಮಾಡಿದ್ದಾನೆ. ಅಂತವರ ಮೇಲೆ ಕೂಡ ನಾವು ನಿಗಾ ವಹಿಸಿದ್ದೇವೆ ಎಂದು ಎಸ್​ಪಿ ಅನುಪಮ ಅಗರವಾಲ್ ತಿಳಿಸಿದ್ದಾರೆ.

Detention of accused in firing on young man
ಯುವಕನ ಮೇಲೆ ಗುಂಡು ಹಾರಿಸಿದ ಆರೋಪಿಗಳ ಬಂಧನ

By

Published : Nov 21, 2020, 2:45 AM IST

Updated : Nov 21, 2020, 6:42 AM IST

ವಿಜಯಪುರ:ವಿಡಿಎ ಕಾಂಪ್ಲೆಕ್ಸ್‌ನಲ್ಲಿ ಯುವಕ ಪದ್ದು ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್​ಪಿ ಅನುಪಮ ಅಗರವಾಲ್ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​ಪಿ, ಗುಂಡು ಹಾರಿಸಿದ ಆರೋಪಿ ತುಳಸಿ ಹರಿಜನ ಹಾಗೂ ಆತನ ಜೊತೆಗೆ ಮೂವರನ್ನ ಈಗಾಗಲೇ ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಆರೋಪಿ ತುಳಿಸಿ ಹರಿಜನ (24) ಯುವಕ ಕಳೆದ ಎರಡ್ಮೂರು ವರ್ಷಗಳಿಂದ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಆತನ ತಂದೆ, ತಾಯಿ ಟೀ ಅಂಗಡಿ ಮಾಡಿಕೊಂಡಿದ್ದಾರೆ ಎಂದು ಎಸ್​ಪಿ ಹೇಳಿದರು.

ಎಸ್​ಪಿ ಅನುಪಮ ಅಗರವಾಲ್ ಪ್ರತಿಕ್ರಿಯೆ

ಬಾಗಪ್ಪ ಹರಿಜನನಿಂದ ಆರೋಪಿ ತುಳಸಿ ಪ್ರೇರಣೆಗೊಳಗಾಗಿ, ಡಿಜೆ ಬಾಯ್ಸ್ ಹಾಗೂ ಡಿಜೆ ಸರ್ಕಾರ ಎಂಬ ವಾಟ್ಸಪ್ ಗ್ರೂಪ್ ಕೂಡ ಕ್ರಿಯೇಟ್ ಮಾಡಿದ್ದಾನೆ. ಅಂತವರ ಮೇಲೆ ಕೂಡ ನಾವು ನಿಗಾ ವಹಿಸಿದ್ದು, ತನಿಖೆ ಮುಂದುವರಿಸಿದ್ದೇವೆ ಎಂದು ಎಸ್​ಪಿ ಅನುಪಮ ಅಗರವಾಲ್ ಮಾಹಿತಿ ನೀಡಿದರು.

Last Updated : Nov 21, 2020, 6:42 AM IST

ABOUT THE AUTHOR

...view details