ವಿಜಯಪುರ:ತೊಗರಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನದೊಂದಿಗೆ ತೊಗರಿ ಖರೀದಿ ಕೇಂದ್ರಗಳನ್ನು ಶೀಘ್ರ ಆರಂಭಿಸಲು ನೋಂದಣಿ ಕಾರ್ಯಕ್ಕೆ ತಕ್ಷಣ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕೃಷಿ ಮಾರಾಟ ಇಲಾಖೆ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಗುಣಮಟ್ಟದ ತೊಗರಿ ಉತ್ಪನ್ನಗಳ ಪ್ರತಿ ಕ್ವಿಂಟಲ್ಗೆ ರೂ.5,800 ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ರೂ.300 ಸೇರಿ ಒಟ್ಟು ರೂ 6,100 ರಂತೆ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ತೊಗರಿ ಖರೀದಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿಗಳನ್ವಯ ಪೂರ್ವಸಿದ್ಧತೆ ಮತ್ತು ರೈತರ ನೋಂದಣಿಯನ್ನು 20 ದಿನಗಳವರೆಗೆ ನಿರ್ವಹಿಸಬೇಕು ಎಂದು ಸೂಚಿಸಿದರು.
ತೊಗರಿ ದಾಸ್ತಾನು ಕುರಿತು :