ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಎಥೆನಾಲ್ ಟ್ಯಾಂಕರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು! - ವಿಜಯಪುರದಲ್ಲಿ ಎಥಿನಾಲ್ ಟ್ಯಾಂಕರ್ ಸ್ಫೋಟ

ವೆಲ್ಡಿಂಗ್ ಮಾಡುವಾಗ ಎಥೆನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

ಎಥಿನಾಲ್ ಟ್ಯಾಂಕರ್ ಸ್ಫೋಟ, Explosion of ethanol tanker: two workers died
ಎಥಿನಾಲ್ ಟ್ಯಾಂಕರ್ ಸ್ಫೋಟ:

By

Published : Dec 21, 2019, 2:10 PM IST

ವಿಜಯಪುರ: ವೆಲ್ಡಿಂಗ್ ಮಾಡುವಾಗ ಎಥೆನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ರೈಲ್ವೆ ನಿಲ್ದಾಣದ ಬಳಿಯ ನಾಡಗೌಡ ರೋಡಲೈನ್ಸ್​ನಲ್ಲಿ ವೆಲ್ಡಿಂಗ್ ಮಾಡುವಾಗ ಟ್ಯಾಂಕರ್ ಬ್ಲಾಸ್ಟ್ ಆಗಿ ಈ ದುರ್ಘಟನೆ ನಡೆದಿದೆ. ವೀರೇಂದ್ರ ಪ್ರಜಾಪತಿ ಹಾಗೂ ರಾಜೀನಾಮೆ ಗಿಡ್ಡೆ ಮೃತ ಕಾರ್ಮಿಕರು. ಘಟನೆಯಲ್ಲಿ ಪ್ರಕಾಶ ಶಿರೋಳ, ವಿಶ್ವನಾಥ ಬಡಿಗೇರ ಹಾಗೂ, ಬಸವರಾಜ್ ಡೊಣೂರ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಎಥೆನಾಲ್ ಟ್ಯಾಂಕರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು

ಎಥೆನಾಲ್ ಖಾಲಿ‌ ಮಾಡಿದ ಬಳಿಕ ಗ್ಯಾರೇಜ್​ಗೆ ತಂದು ವೆಲ್ಡಿಂಗ್ ಮಾಡಿಸಲಾಗುತ್ತಿತ್ತು. ಈ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಭಾರೀ ಸ್ಪೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಸ್ಥಳಕ್ಕೆ ಗೋಳಗುಮ್ಮಟ‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details