ಕರ್ನಾಟಕ

karnataka

ETV Bharat / state

ಸಾಲ ಬಾಧೆ : ಆತ್ಮಹತ್ಯೆಗೆ ಶರಣಾದ ರೈತ

ಬೆಳೆದ ಬೆಲೆ ಕೈ ಗೆ ಬಾರದೆ ಸಾಲ ಮರುಪಾವತಿ ಮಾಡಲಾಗದೆ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

By

Published : May 8, 2019, 2:13 AM IST

ಸಾಲ ಬಾಧೆ ತಾಳದೆ ರೈತ ಆತ್ಮಹತ್ಯೆ

ವಿಜಯಪುರ :ಸಾಲ ಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಜಿಲ್ಲೆಯ ಬೊಮ್ಮನಹಳ್ಳಿಯ ಭೀಮಾಶಂಕರ ಬಿರಾದಾರ್ (45) ಆತ್ಮಹತ್ಯೆ ಮಾಡಿಕೊಂಡ ರೈತ. ದೇವರನಾವದಗಿ ಗ್ರಾಮೀಣ ಬ್ಯಾಂಕ್​ನಲ್ಲಿ ಬತ್ತಿ ಹೋದ ಬಾವಿ ಹಾಗೂ ಬೋರವೇಲ್ ನೀರು ಹರಿಸಲು 2 ಲಕ್ಷ ರೂ ಸಾಲ ಪಡೆದುಕೊಂಡಿದ್ದ.

ಕಳೆದ 2-3 ವರ್ಷದಿಂದ ಮಳೆ ಕೈಕೊಟ್ಟ ಕಾರಣ ಬೆಳೆ ಬಾರದೆ ಲಕ್ಷಾಂತರ ರೂ. ಹಾನಿಯಾಗಿದ್ದು, ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ABOUT THE AUTHOR

...view details