ಕರ್ನಾಟಕ

karnataka

ETV Bharat / state

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ - Farmer suicide news

ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಬಬಲಾದ ಗ್ರಾಮದ ತೋಟದಲ್ಲಿ ನಡೆದಿದೆ.

Farmer suicide
ರೈತ ಆತ್ಮಹತ್ಯೆ

By

Published : Dec 5, 2019, 6:10 PM IST

ವಿಜಯಪುರ:ಸಾಲಬಾಧೆ ತಾಳದೆ ರೈತ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದ ಗ್ರಾಮದ ತೋಟದಲ್ಲಿ ನಡೆದಿದೆ.

ಗ್ರಾಮದ ಬಾಬುರಾವ ಹಂಚನಾಳ(48) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ. ಡಿಸಿಸಿ ಹಾಗೂ ಪಿಎಲ್​ಡಿಇ ಬ್ಯಾಂಕ್​​ಗಳಲ್ಲಿ 8 ಲಕ್ಷ ಮತ್ತು 5 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಸರಿಯಾಗಿ ಬೆಳೆ ಇಲ್ಲದ ಹಿನ್ನೆಲೆ ಎಂಟು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೈಕೊಟ್ಟಿತ್ತು. ಇದರಿಂದ ಸಾಲದ ಸುಳಿಗೆ ಸಿಲುಕಿದ ರೈತ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details