ವಿಜಯಪುರ:ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಉಜನಿ ಹಾಗೂ ಮೀರಾ ಜಲಾಶಯದಿಂದ ಭೀಮಾ ನದಿಗೆ ಹೆಚ್ಚುವರಿ ನೀರು ಬಿಡುಗಡೆಯಾಗಿದ್ದು, ಮತ್ತೊಮ್ಮೆ ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭೀಮಾನದಿಯಲ್ಲಿ ಪ್ರವಾಹದ ಭೀತಿ: ತಾರಾಪುರ ಗ್ರಾಮ ಸ್ಥಳಾಂತರಕ್ಕೆ ಜನರ ಒತ್ತಾಯ - latest vijayapura news
ಮಹಾರಾಷ್ಟ್ರದ ಉಜನಿ ಹಾಗೂ ಮೀರಾ ಜಲಾಶಯದಿಂದ ಭೀಮಾ ನದಿಗೆ ಹೆಚ್ಚುವರಿ ನೀರು ಬಿಡುಗಡೆಯಾಗಿದ್ದು, ಮತ್ತೊಮ್ಮೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
![ಭೀಮಾನದಿಯಲ್ಲಿ ಪ್ರವಾಹದ ಭೀತಿ: ತಾರಾಪುರ ಗ್ರಾಮ ಸ್ಥಳಾಂತರಕ್ಕೆ ಜನರ ಒತ್ತಾಯ](https://etvbharatimages.akamaized.net/etvbharat/prod-images/768-512-4829479-thumbnail-3x2-river.jpg)
ಭೀಮಾನದಿಯಲ್ಲಿ ಪ್ರವಾಹದ ಭೀತಿ.....ಗ್ರಾಮ ಸ್ಥಳಾಂತರಕ್ಕೆ ಸಾರ್ವಜನಿಕರ ಒತ್ತಾಯ
ಭೀಮಾನದಿಯಲ್ಲಿ ಪ್ರವಾಹದ ಭೀತಿ: ತಾರಾಪುರ ಗ್ರಾಮ ಸ್ಥಳಾಂತರಕ್ಕೆ ಸಾರ್ವಜನಿಕರ ಒತ್ತಾಯ
ಜಿಲ್ಲೆಯ ಭೀಮಾ ನದಿ ತಟದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಭೀಮಾನದಿಯ ಸೊನ್ನ ಬ್ಯಾರೇಜಿನ ಹಿನ್ನೀರಿನಿಂದ ತಾರಾಪುರ ಗ್ರಾಮಕ್ಕೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ತಾರಾಪುರ-ಆಲಮೇಲ ರಸ್ತೆ ಜಲವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ.
ಈ ಹಿನ್ನೆಲೆಯಲ್ಲಿ ಗ್ರಾಮ ಸ್ಥಳಾಂತರಿಸುವಂತೆ ಮತ್ತೊಮ್ಮೆ ಕೂಗು ಕೇಳಿ ಬಂದಿದ್ದು, ಸ್ಥಳಾಂತರ ವಿಚಾರ ಬಗೆಹರಿಯದ ಸಮಸ್ಯೆಯಾಗಿದೆ. ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಹೆಚ್ಚಾಗಿದ್ದು, ತಾರಾಪುರ ಗ್ರಾಮ ಸ್ಥಳಾಂತರಿಸುವಂತೆ ಜನರು ಒತ್ತಾಯಿಸಿದ್ದಾರೆ.