ವಿಜಯಪುರ:ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 'ಜೆಡಿಎಸ್ ಮಿಷನ್-123' ತರಲು ಈ ಉಪಚುನಾವಣೆ ವೇದಿಕೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ನಾಜಿಯಾ ಅಂಗಡಿ ಕಳೆದ 6 ತಿಂಗಳಿಂದ ಪ್ರತಿ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಹೀಗಾಗಿ ಸಿಂದಗಿ ಮತಕ್ಷೇತ್ರದಲ್ಲಿ ಜೆಡಿಎಸ್ಉತ್ತಮ ಫಲಿತಾಂಶ ನಿರೀಕ್ಷಿಸುತ್ತಿದೆ ಎಂದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಿಂದಗಿ ಕ್ಷೇತ್ರದಲ್ಲಿ ನೀರಾವರಿ ಯೋಜನೆ ತಂದು ಉತ್ತಮ ಕೆಲಸ ಮಾಡಿದ್ದಾರೆ. ರೈತರು ಸಹ ಗೌಡರು ಮಾಡಿದ ಕೆಲಸದಿಂದ ಇಂದು ನೆಮ್ಮದಿಯಾಗಿ ಊಟ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕ್ಷೇತ್ರದಲ್ಲಿ ಜಾತಿಭೇದ ಮೆರೆತು ಜೆಡಿಎಸ್ಗೆ ಬೆಂಬಲ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.