ವಿಜಯಪುರ:ಕುಡಿದ ಮತ್ತಿನಲ್ಲಿದ್ದ ವ್ಯಕ್ತಿವೋರ್ವ ತನ್ನ ಪತ್ನಿಯನ್ನು ಕುಡುಗೋಲದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಲಮೇಲ ತಾಲೂಕಿನ ದೇವಣಗಾಂವ್ ಗ್ರಾಮದಲ್ಲಿ ನಡೆದಿದೆ.
ವಿಜಯಪುರ: ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯನ್ನ ಕೊಚ್ಚಿ ಕೊಂದ ಪಾಪಿ ಪತಿ - Husband killed his wife in Vijayapura
ಕುಡಿದ ಮತ್ತಿನಲ್ಲಿದ್ದ ಪತಿಯೊಬ್ಬ ತನ್ನ ಪತ್ನಿಯನ್ನು ಕುಡುಗೋಲದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
![ವಿಜಯಪುರ: ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯನ್ನ ಕೊಚ್ಚಿ ಕೊಂದ ಪಾಪಿ ಪತಿ vijaypur murder](https://etvbharatimages.akamaized.net/etvbharat/prod-images/768-512-9305430-thumbnail-3x2-jjj.jpg)
ವಿಜಯಪುರ ಕೊಲೆ
ಪತ್ನಿ ಮಲಕವ್ವ ಹರಗೋಲ (45) ಅವರನ್ನು ಪತಿ ಶಿವಪ್ಪ ಹರಗೋಲ ಕೊಚ್ಚಿ ಕೊಲೆ ಮಾಡಿದ್ದಾನೆ. ಮದ್ಯ ಸೇವಿಸಲು ಹಣ ನೀಡದ ಕಾರಣ ಈ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ.
ಹತ್ಯೆಗೈದ ಬಳಿಕ ಆರೋಪಿ ಶಿವಪ್ಪ ಪರಾರಿಯಾಗಿದ್ದಾನೆ. ಈ ಕುರಿತು ಅಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.