ವಿಜಯಪುರ: ಕೃಷ್ಣಾ ನದಿ ಪಾತ್ರದ ಜನರ ಬಹು ದಿನದ ಬೇಡಿಕೆ ಕೊನೆಗೂ ಈಡೇರುತ್ತಿದೆ. ಕೃಷ್ಣಾ ಭಾಗ್ಯ ಜಲ ನಿಗಮ ಮಂಡಳಿಯ ಪ್ರಧಾನ ಕಾರ್ಯಾಲಯವನ್ನು ಬೆಂಗಳೂರಿನಿಂದ ಆಲಮಟ್ಟಿ ಜಲಾಶಯದ ಆವರಣಕ್ಕೆ ಸ್ಥಳಾಂತರಿಸಲಾಗ್ತಿದೆ.
ಈ ಬಗ್ಗೆ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಂಜುನಾಥ ಹೆಚ್.ಎಂ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿರುವ ಕೆಬಿಜೆಎನ್ಎಲ್ ಸಂಬಂಧಿತ ಎಲ್ಲ ಕಚೇರಿಗಳು ಆದೇಶ ಹೊರಬಿದ್ದ ಒಂದು ವಾರದೊಳಗೆ ಸ್ಥಳಾಂತರ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೆಬಿಜೆಎನ್ಎಲ್ ಕಚೇರಿ ಆಲಮಟ್ಟಿಗೆ ಸ್ಥಳಾಂತರ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವೇಗ ನೀಡಲು ಹಾಗೂ ಆ ಭಾಗದ ಜನರಿಗೆ ರಾಜ್ಯದ ಆಡಳಿತ ಹತ್ತಿರವಾಗಲು ಕೃಷ್ಣಾ ಭಾಗ್ಯ ಜಲ ನಿಗಮ ಮಂಡಳಿ ಕಚೇರಿಯನ್ನು ಬೆಂಗಳೂರಿನಿಂದ ಆಲಮಟ್ಟಿಗೆ ಸ್ಥಳಾಂತರಿಸಲು ರಾಜ್ಯ ಸರ್ಕಾರ 2021 ಅಕ್ಟೋಬರ್ 30ರಂದು ಆದೇಶ ಹೊರಡಿಸಿತ್ತು.
ಈ ಕುರಿತು 2021ರ ನವೆಂಬರ್ 24ರಂದು ವರದಿ ಪರಿಶೀಲನೆ ನಡೆಸಿದ್ದ ಜಲಸಂಪನ್ಮೂಲ ಇಲಾಖೆ ಸಾರ್ವಜನಿಕರ ಹಿತದೃಷ್ಟಿ ಹಾಗೂ ನ್ಯಾಯಾಲಯದ ಆದೇಶ ಪಾಲನೆ ಮಾಡಿ 2022ರ ಮೇ 12ರಂದು (ಗುರುವಾರ) ಕೆಬಿಜೆಎನ್ಎಲ್ ಕಚೇರಿಯನ್ನು ಬೆಂಗಳೂರಿನಿಂದ ಆಲಮಟ್ಟಿಗೆ ಸ್ಥಳಾಂತರಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:ಮೇ 19ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟ: ಸಚಿವ ಬಿ.ಸಿ.ನಾಗೇಶ್