ಕರ್ನಾಟಕ

karnataka

ETV Bharat / state

ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಕೆಎಸ್​ಆರ್​ಟಿಸಿ ಸಿಬ್ಬಂದಿ - ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ ಕೆಎಸ್​ಆರ್​ಟಿಸಿ ಸಿಬ್ಬಂದಿ

ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡುತ್ತಿದೆ. ಈ ಹಿನ್ನೆಲೆ ವಿಜಯಪುರದಲ್ಲಿ ಕೆಎಸ್​ಆರ್​ಟಿಸಿ ನೌಕರರು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ವಿಜಯಪುರದಲ್ಲಿ ಜಾಗೃತಿ ಮೂಡಿಸುತ್ತಿರುವ  ಕೆಎಸ್​ಆರ್​ಟಿಸಿ ಸಿಬ್ಬಂದಿ
ವಿಜಯಪುರದಲ್ಲಿ ಜಾಗೃತಿ ಮೂಡಿಸುತ್ತಿರುವ ಕೆಎಸ್​ಆರ್​ಟಿಸಿ ಸಿಬ್ಬಂದಿ

By

Published : Apr 16, 2020, 3:12 PM IST

ವಿಜಯಪುರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣದ ಬಗ್ಗೆ ಜನರು ಆತಂಕಗೊಂಡಿದ್ದು, ಜನರಲ್ಲಿ ಭಯ ಹೋಗಲಾಡಿಸಿ ಜಾಗೃತಿ ಮೂಡಿಸಲು ಕೆಎಸ್​ಆರ್​ಟಿಸಿ ನೌಕರರು ಮುಂದಾಗಿದ್ದಾರೆ.

ವಿಜಯಪುರದಲ್ಲಿ ಜಾಗೃತಿ ಮೂಡಿಸುತ್ತಿರುವ ಕೆಎಸ್​ಆರ್​ಟಿಸಿ ಸಿಬ್ಬಂದಿ

ಸಿಂದಗಿ ತಾಲೂಕಿನ ದೇವರಹಿಪ್ಪರಗಿಯ ಕೊಂಡಗೂಳಿ ಗ್ರಾಮದಲ್ಲಿ ಪೊಲೀಸರ ಜತೆ ಸೇರಿ ಕೆಎಸ್​ಆರ್​ಟಿಸಿ ನೌಕರರು ಸಮವಸ್ತ್ರ ಹಾಕಿಕೊಂಡು, ಕೈಯಲ್ಲಿ ಲಾಠಿ ಹಿಡಿದು ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ ಕೊರೊನಾದ ಪರಿಣಾಮ ಎನು?, ಅದು ಹೇಗೆ ಹರಡುತ್ತದೆ?, ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ತಿಳಿಹೇಳಿ ಜಾಗೃತಿ ಮೂಡಿಸಿದರು.

ಕೆಲವು ಕಡೆ ಮನೆಯಿಂದ ಅನಗತ್ಯವಾಗಿ ಹೊರಗೆ ಬರುವ ಜನರಿಗೆ ಲಾಠಿ ರುಚಿ ಸಹ ತೋರಿಸಿದರು. ಪೊಲೀಸರ ಅನುಮತಿ ಪಡೆದಿದ್ದ ಕೆಎಸ್​ಆರ್​ಟಿಸಿ ನೌಕರರು ರಜೆ ದಿನದಲ್ಲಿ ಮನೆಯಲ್ಲಿ ಕುಳಿತುಕೊಳ್ಳದೆ ಗ್ರಾಮದಲ್ಲಿ ಜಾಗೃತಿ ಮೂಡಿಸಲು ಮುಂದಾಗಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ನೌಕರರಿಗೆ ಕೆಲ ಸ್ಥಳೀಯರು ಸಾಥ್​ ನೀಡಿದರು.

For All Latest Updates

ABOUT THE AUTHOR

...view details