ವಿಜಯಪುರ: ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟಗಾರು ಲಾಕ್ ಡೌನ್ ಆದೇಶ ಗಾಳಿಗೆ ತೂರಿದ್ದಲ್ಲದೇ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದೆ ವ್ಯವಹಾರ ನಡೆಸುತ್ತಿರುವುದು ತಿಳಿದುಬಂದಿದೆ.
ಲಾಕ್ ಡೌನ್ ಆದೇಶ ಗಾಳಿಗೆ ತೂರಿ, ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದ ವ್ಯಾಪಾರಿಗಳು - Lockdown order
ದೇಶದಿಂದ ಕೂರೊನಾ ವೈರಾಣು ತಡೆಗಟ್ಟಲು ಜಿಲ್ಲಾಡಳಿತ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಸರ್ಕಾರದ ಆದೇಶ, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸೂಚನೆ ನೀಡಿತ್ತು. ಆದರೆ, ಪ್ಯಾಪಾರಿಗಳು ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪಾಗಿ ತರಕಾರಿ, ಹಣ್ಣು ವ್ಯಾಪಾರ ಮಾಡಿ ಲಾಕ್ ಡೌನ್ ಆದೇಶ ಉಲ್ಲಂಘಿಸಿದ್ದಾರೆ.

ಲಾಕ್ ಡೌನ್ ಆದೇಶ ಗಾಳಿಗೆ ತೂರಿ, ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳದ ವ್ಯಾಪಾರಿಗಳು
ಬೆಳಗ್ಗೆ 4 ಗಂಟೆಯಿಂದ 7 ಗಂಟೆಯವರಿಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ, ಹಣ್ಣು ಖರೀದಿಗೆ ಜಿಲ್ಲಾಡಳಿತ ಕಳೆದ ಒಂದು ವಾರದಿಂದ ಅನುಮತಿ ನೀಡಿದೆ. ಆದರೆ, ದೇಶದಿಂದ ಕೂರೊನಾ ವೈರಾಣು ತಡೆಗಟ್ಟಲು ಜಿಲ್ಲಾಡಳಿತ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಸರ್ಕಾರದ ಆದೇಶ, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸೂಚನೆ ನೀಡಿತ್ತು. ಆದರೆ, ಪ್ಯಾಪಾರಿಗಳು ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪಾಗಿ ತರಕಾರಿ, ಹಣ್ಣು ವ್ಯಾಪಾರ ಮಾಡಿ ಲಾಕ್ ಡೌನ್ ಆದೇಶ ಉಲ್ಲಂಘಿಸಿದ್ದಾರೆ.
ಅಷ್ಟೇಅಲ್ಲ ವ್ಯಾಪರಸ್ತರು ಯಾರೂ ಕೂಡ ಮಾಸ್ಕ್, ಗ್ಲೌಸ್ ಧರಿಸಿರುವುದು ಕಣ್ಣಿಗೆ ಬೀಳುತ್ತಿಲ್ಲ.