ವಿಜಯಪುರ: ಹಿಂದುಪರ ಇರುವ ಶಾಸಕರಿಗೆ 100 ಕೋಟಿ ಅನುದಾನ ನೀಡಲು ಸಿಎಂ ಹಿಂದೇಟು ಹಾಕುತ್ತಿದ್ದಾರೆ. ಅದೇ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಹಲವರಿಗೆ 200 ಕೋಟಿ ರೂ. ಅನುದಾನ ನೀಡುತ್ತಿದ್ದಾರೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಪ್ರಶ್ನಿಸುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತೆ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ನಗರದ ಹೊರ ವಲಯದ ಭೂತನಾಳ ಕೆರೆಯ ಶುದ್ಧ ನೀರಿನ ಘಟಕದ ಹೊಸ ಕಟ್ಟಡದ ಪೂಜೆ ಹಾಗೂ ಘಟಕಕ್ಕೆ ಚಾಲನೆ ನೀಡಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ರು. ಅಧಿವೇಶನದಲ್ಲಿ ಈ ಪ್ರಸ್ತಾಪಿಸಿ ಕಾಂಗ್ರೆಸ್ ಶಾಸಕರಿಗೆ ಎಷ್ಟು ಅನುದಾನ ನೀಡಿದ್ದೀರಿ? ಬಿಜೆಪಿ ಶಾಸಕರಿಗೆ ಎಷ್ಟು ಅನುದಾನ ನೀಡಿದ್ದೀರಿ? ಎಂದು ಮುಖ್ತಮಂತ್ರಿಗಳನ್ನು ಪ್ರಶ್ನಿಸುವುದಾಗಿ ತಿಳಿಸಿದ್ರು.
ಹಿಂದೂ ದೇವತೆಗಳಿಗೆ ಸತತ ಅಪಮಾನ ಮಾಡುವ ಶಾಸಕ ಜಮೀರ ಅಹಮ್ಮದ್ಗೆ 200 ಕೋಟಿ ಅನುದಾನ ಏಕೆ ನೀಡಿದ್ದೀರಿ? ಅವರು ಎಷ್ಟೇ ಅವಮಾನ ಮಾಡಿದರೂ ಸುಮ್ಮನೆ ಏಕೆ ಇರುತ್ತೀರಿ ಎಂದು ಇದೇ ವೇಳೆ ಮುಖ್ಯಮಂತ್ರಿಯನ್ನು ಪ್ರಶ್ನಿಸಿದರು.
ಭದ್ರತೆ ವಾಪಸ್ಗೆ ಅಸಮಾಧಾನ : ತಮಗೆ ಸರ್ಕಾರ ನೀಡಿದ್ದ ವಿಶೇಷ ಭದ್ರತೆಯನ್ನು ಸಿಎಂ ಹಿಂಪಡೆದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಿಜಯಪುರದ ಶಾಸಕ ಯತ್ನಾಳ್ ಅವರು, ಸಿಎಂ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಮಾತನಾಡಿದ್ದಕ್ಕೆ ಈ ಸೌಲಭ್ಯ ಕಡಿತಗೊಳಿಸಿದ್ದಾರೆ ಎಂದು ಆರೋಪಿಸಿದ್ರು. ಸೋಮವಾರ ನಾನು ಬೆಂಗಳೂರಿಗೆ ಹೋಗುತ್ತಿರುವುದಾಗಿ ತಿಳಿಸಿದರು.