ಕರ್ನಾಟಕ

karnataka

ETV Bharat / state

ರಾಜ್ಯಕ್ಕೆ ಗೃಹಸಚಿವರು ಬೇಕಾಗಿದ್ದಾರೆಂದು ಮಾಧ್ಯಮ ಪ್ರಕಟಣೆ ಹೊರಡಿಸುವುದು ಉತ್ತಮ.. ಶಾಸಕ ಯತ್ನಾಳ್‌ - ಗೃಹ ಸಚಿವರ ವಿರುದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರತಿಕ್ರಿಯೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಉಳಿದ ಸ್ಥಾನಗಳನ್ನು ಶೀಘ್ರ ತುಂಬಲು ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆ ಸಹ ಕಾರ್ಯಕಾರಣಿಯಲ್ಲಿ ಚರ್ಚೆಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ್
ಶಾಸಕ ಬಸನಗೌಡ ಪಾಟೀಲ ಯತ್ನಾಳ್

By

Published : Apr 18, 2022, 4:06 PM IST

ವಿಜಯಪುರ :ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆ ಗೃಹಸಚಿವರು ತೋರುತ್ತಿರುವ ಸಾಫ್ಟ್​ ಕಾರ್ನರ್ ನೋಡಿದ್ರೆ ರಾಜ್ಯಕ್ಕೆ ಗೃಹಸಚಿವರು ಬೇಕಾಗಿದ್ದಾರೆ ಎಂದು ಮಾಧ್ಯಮದಲ್ಲಿ ಪ್ರಕಟಣೆ ಹೊರಡಿಸುವುದು ಉತ್ತಮ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಸ್ವಪಕ್ಷಿಯ ಸಚಿವರ ಮೇಲೆಯೇ ವ್ಯಂಗವಾಡಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿರುವುದು..

ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಗೃಹ ಇಲಾಖೆ ಎಲ್ಲೆಲ್ಲಿ ವೀಕ್​ ಇದೆ ಅಲ್ಲಿ ಇಂಥ ಘಟನೆಗಳು ನಡೆಯುತ್ತವೆ. ಹೀಗಾಗಿ, ರಾಜ್ಯಕ್ಕೆ ಒಬ್ಬ ಸಮರ್ಥ, ಸ್ಟ್ರಾಂಗ್​ ಗೃಹಸಚಿವರು ಬೇಕಾಗಿದ್ದಾರೆ. ಈ ಕಾರಣಕ್ಕೆ ಗೃಹಸಚಿವರು ಬೇಕಾಗಿದ್ದಾರೆ ಎಂದು ಪ್ರಕಟಣೆ ನೀಡಲಿ ಎಂದರು.

ಸ್ಪಷ್ಟ ಬಹುಮತ ಬರಬೇಕು :ನಿನ್ನೆ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಎಲ್ಲ ನಾಯಕರಿಗೂ ಸ್ಪಷ್ಟ ಸಂದೇಶ ನೀಡಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಿಂದ ಪಕ್ಷ ಅಧಿಕಾರಕ್ಕೆ ಬರಲು ನಾಯಕರು ಮನೆ ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ತಲುಪಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು.

ಈ ತಿಂಗಳ ಅಂತ್ಯಕ್ಕೆ ಸಂಪುಟ ವಿಸ್ತರಣೆ :ಮುಖ್ಯಮಂತ್ರಿ ಬೊಮ್ಮಾಯಿ ಅವರು ಈಗಾಗಲೇ ಉಳಿದ ಸ್ಥಾನಗಳನ್ನು ಶೀಘ್ರ ತುಂಬಲು ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆ ಸಹ ಕಾರ್ಯಕಾರಣಿಯಲ್ಲಿ ಚರ್ಚೆಯಾಗಿದೆ. ಇದೇ ತಿಂಗಳು ಅಂತ್ಯದೊಳಗಾಗಿ ಸಂಪುಟ ವಿಸ್ತರಣೆ ಮಾಡುವುದು ಬಹುತೇಕ ಖಚಿತವಾಗಿದೆ. ಹಿರಿಯರನ್ನು ಕೈ ಬಿಡುವ ವಿಚಾರ ನನಗೆ ಗೊತ್ತಿಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ್ ಸ್ಪಷ್ಟಪಡಿಸಿದರು.

ಹುಬ್ಬಳ್ಳಿ ಗಲಭೆ : ರಾಜ್ಯದಲ್ಲಿ ಪದೇಪದೆ ಉಂಟಾಗುತ್ತಿರುವ ಅರಾಜಕತೆ ತಡೆಯಲು ಸರ್ಚ್‌ ಆಪರೇಷನ್ ಅವಶ್ಯಕವಿದೆ. ಯಾರ ಬಳಿ ಗನ್, ತಲ್ವಾರ್ ಇದೆ, ಮನೆಯ ಮೇಲೆ ಕಲ್ಲು ಇಟ್ಟುಕೊಂಡಿರುತ್ತಾರೆ ಎನ್ನುವುದು ಗುಪ್ತಚರ ಇಲಾಖೆಗೆ ಮಾಹಿತಿ ಇರುತ್ತದೆ. ಅದನ್ನು ಸರ್ಚ್‌ ಆಪರೇಷನ್ ಮೂಲಕ ಕಂಡು ಹಿಡಿಯಬೇಕು. ಗೃಹಸಚಿವರು ಕಾರ್ಯಪ್ರವೃತರಾಗಬೇಕು ಎಂದರು.

ಓದಿ:ಈಶ್ವರಪ್ಪ ವಿರುದ್ಧ ಪ್ರತಿಭಟನೆ : ಸಿದ್ದು, ಡಿಕೆಶಿ, ಸುರ್ಜೇವಾಲಾ ಸೇರಿದಂತೆ 36 ಕಾಂಗ್ರೆಸ್ ನಾಯಕರ ಮೇಲೆ FIR

For All Latest Updates

TAGGED:

ABOUT THE AUTHOR

...view details