ಕರ್ನಾಟಕ

karnataka

ETV Bharat / state

ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಾಟದಲ್ಲಿ ವಿದೇಶಿ ಶಕ್ತಿಗಳ ಕೈವಾಡ: ಯತ್ನಾಳ್​ ಶಂಕೆ - ವಿಜಯಪುರ

ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜ ಬದಲು ಬೇರೆ ಧ್ವಜ ಹಾರಿಸಿರುವ ಕೃತ್ಯದ ಹಿಂದೆ ವಿದೇಶಿ ಶಕ್ತಿಗಳ ಕೈವಾಡವಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಶಂಕೆ ವ್ಯಕ್ತಪಡಿಸಿದ್ದಾರೆ.

MLA Basanagowda patil Yatnal
ಶಾಸಕ ಬಸನಗೌಡ ಪಾಟೀಲ ಯತ್ನಾಳ್​

By

Published : Jan 27, 2021, 1:22 PM IST

Updated : Jan 27, 2021, 1:36 PM IST

ವಿಜಯಪುರ: ದೆಹಲಿಯ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜದ ಬದಲು ಬೇರೆ ಧ್ವಜ ಹಾರಿಸಿರುವ ದುಷ್ಕೃತ್ಯದ ಹಿಂದೆ ಪಾಕಿಸ್ತಾನ, ಚೀನಾ ಹಾಗೂ ನಮ್ಮ ದೇಶದಲ್ಲಿ ಹತಾಶೆಗೊಂಡಿರುವ ಪಕ್ಷಗಳ ಕೈವಾಡವಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, "ದೇಶದ ಪ್ರಧಾನಿ ನರೇಂದ್ರ ಅವರ ವರ್ಚಸ್ಸು ಸಹಿಸಲಾಗದೇ ಕಾಂಗ್ರೆಸ್, ಕಮ್ಯುನಿಸ್ಟ್ , ಆಮ್​ಆದ್ಮಿ ಪಕ್ಷಗಳು ಉದ್ದೇಶಪೂರ್ವಕವಾಗಿ ಕೆಂಪುಕೋಟೆ ಮೇಲೆ ಬೇರೆ ಧ್ವಜ ಹಾರಿಸಲು ಪ್ರೇರೇಪಿಸಿದ್ದಾರೆ. ಇನ್ನೂ 20 ವರ್ಷವಾದರೂ ಬಿಜೆಪಿ ಅಧಿಕಾರದಲ್ಲಿ ಮುಂದುವರೆಯುತ್ತದೆ ಎನ್ನುವ ಹತಾಶೆ ಭಾವನೆಯಿಂದ ಇಂಥ ಕೃತ್ಯಕ್ಕೆ ಕುಮ್ಮಕ್ಕು ನೀಡಲಾಗಿದೆ" ಎಂದು ಶಂಕೆ ವ್ಯಕ್ತಪಡಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಪ್ರತಿಕ್ರಿಯೆ

ಹೊರಗಡೆಯಿಂದ ಪಾಕಿಸ್ತಾನ, ಚೀನಾ ದೇಶಗಳು ಪರೋಕ್ಷವಾಗಿ ಬೆಂಬಲ ನೀಡುತ್ತಿವೆ. ಈ ಕೃತ್ಯಕ್ಕೆ ಪಾಕಿಸ್ತಾನ ಹಾಗೂ ಚೀನಾದ ಫಂಡಿಂಗ್ ಇದೆ. ಕಾಂಗ್ರೆಸ್ ಸಹ ಪರೋಕ್ಷವಾಗಿ ಹೋರಾಟಗಾರರಿಗೆ ಹಣಕಾಸಿನ ನೆರವು ನೀಡಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಉಗ್ರಪ್ಪನಂತವರು ಹಾಗೂ ವಿವಿಧ ಪಕ್ಷಗಳ ಮುಖಂಡರು ಅಧಿಕಾರ ದಾಹಕ್ಕಾಗಿ ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ. ಇಂಥವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಯತ್ನಾಳ್​ ಆಗ್ರಹಿಸಿದರು.

ಕೇಂದ್ರ ಗುಪ್ತಚರ ಇಲಾಖೆಗೆ ಮೊದಲೇ ಮಾಹಿತಿ ಇತ್ತು. ಆದರೆ ಸುಪ್ರಿಂ ಕೋರ್ಟ್ ರೈತರ ಹೋರಾಟಕ್ಕೆ ಅನುಮತಿ‌ ನೀಡಿದ ಕಾರಣ ಗುಪ್ತಚರ ಇಲಾಖೆ ಕೈಕಟ್ಟಿಕುಳಿತುಕೊಳ್ಳಬೇಕಾಯಿತು ಎಂದರು.

Last Updated : Jan 27, 2021, 1:36 PM IST

ABOUT THE AUTHOR

...view details