ಕರ್ನಾಟಕ

karnataka

ETV Bharat / state

ಕೊರೊನಾ, ಜಿಡಿಪಿ ಸಮಸ್ಯೆ ಬಿಟ್ಟು ಬೇರೆ ವಿಷಯಕ್ಕೆ ಮಹತ್ವ ಕೊಡಲಾಗುತ್ತಿದೆ: ಎಂ.ಬಿ. ಪಾಟೀಲ ಬೇಸರ - ವಿಜಯಪುರಕ್ಕೆ ಎಂ.ಬಿ.ಪಾಟೀಲ ಭೇಟಿ

ಮಖಣಾಪುರ ಕೆರೆಗೆ ಮಾಜಿ ಸಚಿವ ಎಂ ಬಿ ಪಾಟೀಲ ಅವರು ಬಾಗಿನ ಅರ್ಪಿಸಿದರು. ಈ ವೇಳೆ ಮಾತನಾಡಿದ ಅವರು, ಕಳೆದ ಬಾರಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯಲ್ಲಿ ನಷ್ಟ ಅನುಭವಿಸಿದವರಿಗೆ ಸರಿಯಾಗಿ ಪರಿಹಾರ ನೀಡಿಲ್ಲ. ಪ್ರವಾಹದಲ್ಲಿ 18 ಲಕ್ಷ ರೂ.ಗಳಷ್ಟು ಆಸ್ತಿ, ಪಾಸ್ತಿ ನಷ್ಟವಾಗಿದೆ. ಆದರೆ, ಕೇಂದ್ರ ಅಧ್ಯಯನ ತಂಡ ರಾಜ್ಯ ಸರ್ಕಾರಕ್ಕೆ ಕೇವಲ 34 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದೆ. ಇದನ್ನು ಸಹ ಬಿಜೆಪಿ ಸರ್ಕಾರ ಸರಿಯಾಗಿ ಬಳಸಿಕೊಂಡಿಲ್ಲ. ಕೇವಲ 4ಸಾವಿರ ಕೋಟಿ ರೂ. ಹಣ ಖರ್ಚು ಮಾಡಿದೆ. ಉಳಿದ 30ಸಾವಿರ ಕೋಟಿ ಹಣ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

MP Patil outrage against Sandalwood drug case
ಎಂ.ಬಿ.ಪಾಟೀಲ

By

Published : Sep 18, 2020, 3:43 PM IST

ವಿಜಯಪುರ: ರಾಜ್ಯದಲ್ಲಿ ಮಾದಕ ದ್ರವ್ಯ ವಿಷಯವನ್ನೇ ದೊಡ್ಡ ಸಮಸ್ಯೆಯನ್ನಾಗಿ ಬಿಂಬಿಸಲಾಗುತ್ತಿದೆ. ದೇಶದಲ್ಲಿ ಕೊರೊನಾ ವೈರಸ್, ಚೀನಾ ಗಡಿ ಸಂಘರ್ಷ ಹಾಗೂ ಜಿಡಿಪಿ ಪಾತಾಳಕ್ಕೆ ಕುಸಿದಿರುವಾಗ ಅದರ ಬಗ್ಗೆ ಗಮನಹಿಸುವುದನ್ನು ಬಿಟ್ಟು ಬೇಡದಿರುವ ವಿಷಯವನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಆತಂಕ ವ್ಯಕ್ತಪಡಿಸಿದರು.

ಮಖಣಾಪುರ ಕೆರೆಗೆ ಬಾಗಿನ ಅರ್ಪಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್​ನಿಂದ 50 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಲಕ್ಷಕ್ಕೂ ಅಧಿಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿಯೇ ನಿತ್ಯ 10ಸಾವಿರ ಜನರಿಗೆ ಕೊರೊನಾ ಸೋಂಕು ತಗುಲುತ್ತಿದೆ. ಇಂಥ ಸ್ಥಿತಿಯಲ್ಲಿ ಸ್ಯಾಂಡಲ್​ವುಡ್ ಗೆ ಡ್ರಗ್ಸ್ ದಂಧೆಯ ಕಳಂಕ ಅಂಟಿಕೊಂಡಿದೆ. ಇದನ್ನೇ ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಇದನ್ನೆಲ್ಲಾ ನೋಡಿದರೆ ಸಮಾಜ ಯಾವ ದಾರಿಗೆ ಹೋಗುತ್ತಿದೆ ಎನ್ನುವುದನ್ನು ಎಲ್ಲರೂ ಅರಿಯಬೇಕು ಎಂದರು.

ಮಾಜಿ ಸಚಿವ ಎಂ.ಬಿ. ಪಾಟೀಲ ಪ್ರತಿಕ್ರಿಯೆ

ಮಾದಕ ದ್ರವ್ಯ ದಂಧೆ ಸಣ್ಣದಲ್ಲ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದಕ್ಕೆ ಪೊಲೀಸರು ಇದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ. ಅದರ ಬದಲಿಗೆ ದೇಶದಲ್ಲಿ ಕೊರೊನಾದಿಂದ ಆಗುತ್ತಿರುವ ಕಷ್ಟದ ಬಗ್ಗೆ ಚಿಂತಿಸಬೇಕಾಗಿದೆ ಎಂದು ಎಂ ಬಿ ಪಾಟೀಲ್​ ಹೇಳಿದ್ರು.

ರಾಜ್ಯ ಸರ್ಕಾರ ಸಹ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಕಳೆದ ಬಾರಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯಲ್ಲಿ ನಷ್ಟ ಅನುಭವಿಸಿದವರಿಗೆ ಸರಿಯಾಗಿ ಪರಿಹಾರ ನೀಡಿಲ್ಲ. ಕೊಟ್ಟಿರುವ ಅಲ್ಪಸ್ವಲ್ಪ ಪರಿಹಾರವನ್ನು ಸಹ ಬಜೆಪಿ ಸರ್ಕಾರ ಸರಿಯಾಗಿ ಬಳಸಿಕೊಂಡಿಲ್ಲ ಎಂದು ಆರೋಪಿಸಿದರು.

For All Latest Updates

ABOUT THE AUTHOR

...view details