ಕರ್ನಾಟಕ

karnataka

ಮುದ್ದೇಬಿಹಾಳ ಸರಕಾರಿ ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ ಶಂಕೆ: ಆಸ್ಪತ್ರೆಗೆ ಸ್ಯಾನಿಟೈಸರ್​ ಸಿಂಪಡನೆ

ಮುದ್ದೇಬಿಹಾಳ ಪಟ್ಟಣದ ಸರಕಾರಿ ಆಸ್ಪತ್ರೆಗೆ ಪುರಸಭೆ ಸಿಬ್ಬಂದಿ ಹೈಪೋಕ್ಲೋರೈಡ್ ದ್ರಾವಣವನ್ನು ನೀರಿನಲ್ಲಿ ಹಾಕಿ ಸಿಂಪಡಣೆ ಮಾಡಿದರು.

By

Published : Jun 15, 2020, 11:06 PM IST

Published : Jun 15, 2020, 11:06 PM IST

ಆಸ್ಪತ್ರೆಗೆ ಸ್ಯಾನಿಟೈಸರ್​ ಸಿಂಪಡನೆ
ಆಸ್ಪತ್ರೆಗೆ ಸ್ಯಾನಿಟೈಸರ್​ ಸಿಂಪಡನೆ

ಮುದ್ದೇಬಿಹಾಳ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಒಬ್ಬರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವಿಜಯಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸಂಪರ್ಕದಲ್ಲಿ ಬಂದಿರುವ ಕುಟುಂಬದವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ಸ್ಯಾನಿಟೈಸರ್​ ಸಿಂಪಡನೆ

ಈಟಿವಿ ಭಾರತದೊಂದಿಗೆ ಮಾತನಾಡಿರುವ ತಾಲೂಕಾಡಳಿತ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ, ಸರಕಾರಿ ಆಸ್ಪತ್ರೆಯನ್ನು ಸೀಲ್‌ಡೌನ್ ಮಾಡಲಾಗುವುದಿಲ್ಲ. ಅಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಲು ಮೇಲಾಧಿಕಾರಿಗಳು ನಿರ್ದೇಶನ ನೀಡಿದ್ದು, ಅದರಂತೆ ಸೋಮವಾರ ಇಡೀ ಆಸ್ಪತ್ರೆಗೆ ಹೈಪೋಕ್ಲೋರೈಡ್ ದ್ರಾವಣವನ್ನು ನೀರಿನಲ್ಲಿ ಮಿಶ್ರಣ ಮಾಡಿ ಸಿಂಪಡಣೆ ಮಾಡಲಾಗಿದೆ. ಕೊರೊನಾ ಸೋಂಕಿನ ಲಕ್ಷಣಗಳಿರುವ ಸಿಬ್ಬಂದಿಯ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ. ವಿನಾಕಾರಣ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ABOUT THE AUTHOR

...view details