ಕರ್ನಾಟಕ

karnataka

ETV Bharat / state

53 ದಿನಗಳ ಹೋರಾಟಕ್ಕೆ ಜಯ.. ಪುರಸಭೆ ಮುಖ್ಯಾಧಿಕಾರಿ ಬಾಗಲಕೋಟ ಅಮಾನತು - ಮುದ್ದೇಬಿಹಾಳ ಪುರಸಭೆ ಮುಖ್ಯಾಧಿಕಾರಿ

ಮುದ್ದೇಬಿಹಾಳ ಪುರಸಭೆ ಮುಖ್ಯಾಧಿಕಾರಿ ಎಸ್.ಎಸ್ ಬಾಗಲಕೋಟ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಪೌರಾಡಳಿತ ನಿರ್ದೇಶಕಿ ಮಂಜುಶ್ರೀ ಎನ್ ಆದೇಶಿಸಿದ್ದಾರೆ.

Municipal Chief Bagalkota suspended
ಪುರಸಭೆ ಮುಖ್ಯಾಧಿಕಾರಿ ಬಾಗಲಕೋಟ ಅಮಾನತು

By

Published : Sep 10, 2022, 12:16 PM IST

ಮುದ್ದೇಬಿಹಾಳ(ವಿಜಯಪುರ):ಪುರಸಭೆ ಸದಸ್ಯ ಮೆಹಬೂಬ ಗೊಳಸಂಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವು ಹರಿಜನ 53 ದಿನಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಎಸ್.ಎಸ್ ಬಾಗಲಕೋಟ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜೊತೆಗೆ ಅವರ ಮೂಲ ಹುದ್ದೆಗೆ ನಿಯೋಜಿಸಿ ಸರ್ಕಾರದ ಪೌರಾಡಳಿತ ನಿರ್ದೇಶಕಿ ಮಂಜುಶ್ರೀ ಎನ್ ಆದೇಶ ಹೊರಡಿಸಿದ್ದಾರೆ.

ಕಳೆದ 53 ದಿನಗಳಿಂದ ಮುಖ್ಯಾಧಿಕಾರಿ ಅವ್ಯವಹಾರಗಳು ಸೇರಿದಂತೆ 12 ಬೇಡಿಕೆಗಳನ್ನು ಇಟ್ಟುಕೊಂಡು ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಆಗ್ರಹಿಸಿ ವಿವಿಧ ಹಂತದ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಹೋರಾಟಗಾರರು ತಮಗೆ ನ್ಯಾಯ ಸಿಗುವವರೆಗೂ ಧರಣಿ ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ಸರ್ಕಾರದ ಪೌರಾಡಳಿತ ನಿರ್ದೇಶಕಿ ಮಂಜುಶ್ರೀ ಎನ್ ಆದೇಶಿಸಿದ್ದಾರೆ.

ಈ ಹಿನ್ನೆಲೆ ಜಿಲ್ಲಾಧಿಕಾರಿಗಳು ಮೂವರು ಅಧಿಕಾರಿಗಳ ತಂಡವನ್ನು ನಿಯೋಜಿಸಿ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶಿಸಿದ್ದರು. ಅದರಂತೆ ಸಲ್ಲಿಸಿದ್ದ ವರದಿಯನ್ನು ಬೆಂಗಳೂರಿನ ಪೌರಾಡಳಿತ ನಿರ್ದೇಶಕರಿಗೆ ಕ್ರಮಕ್ಕೆ ಸಲ್ಲಿಸಿದ್ದರು. ತನಿಖಾ ತಂಡ 4 ಅಂಶಗಳಲ್ಲಿ ಕರ್ತವ್ಯಲೋಪ ಎಸಗಿದ್ದಾರೆಂದು ವರದಿ ಮಾಡಿರುವದನ್ನು ನಿರ್ದೇಶನಾಲಯದ ಶಿಸ್ತು ಪ್ರಾಧಿಕಾರಿ ಮಂಜುಶ್ರೀ ಇವರು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) ಅಡಿ ಮುಖ್ಯಾಧಿಕಾರಿ ಬಾಗಲಕೋಟ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಪುರಸಭೆ ಮುಖ್ಯಾಧಿಕಾರಿ ಬಾಗಲಕೋಟ ಅಮಾನತು

ಎಸ್.ಎಸ್.ಬಾಗಲಕೋಟ ಅವರ ಮೂಲ ಹುದ್ದೆ ಹಾರೂಗೇರಿ ಪುರಸಭೆಯ ಕಚೇರಿ ವ್ಯವಸ್ಥಾಪಕರ ಹುದ್ದೆಗೆ ವರ್ಗಾಯಿಸಿ ಆದೇಶಿಸಲಾಗಿದೆ. ಅಲ್ಲದೇ ತಕ್ಷಣ ಜಾರಿಗೆ ಬರುವಂತೆ ಇ ತಂತ್ರಾಂಶದಲ್ಲಿ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಮೂಲಕ ಲಾಗಿನ್ ಆಗಿರುವ ಡಿಎಸ್‌ಸಿ ಕೀಯನ್ನು ತಕ್ಷಣದಿಂದ ನಿಷ್ಕ್ರಿಯಗೊಳಿಸಿ ವರದಿ ನೀಡಲು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಡಿಎಂಎ ನಿದೇರ್ಶಕರು ಸೂಚಿಸಿದ್ದಾರೆ.

ಏತನ್ಮಧ್ಯೆ ಮಾಧ್ಯಮದವರೊಂದಿಗೆ ಮಾತನಾಡಿರುವ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ ಡಂಬಳ, ನಿರ್ದೇಶಕರ ಆದೇಶದಂತೆ ಆದಷ್ಟು ಬೇಗ ಮುದ್ದೇಬಿಹಾಳ ಪುರಸಭೆಗೆ ಪ್ರಭಾರ ಮುಖ್ಯಾಧಿಕಾರಿಯನ್ನು ನಿಯೋಜಿಸಿ ಸಾರ್ವಜನಿಕರ ಕೆಲಸಗಳಿಗೆ ಅಡಚಣೆಯಾಗದಂತೆ ನೋಡಿಕೊಳ್ಳುವುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಮುದ್ದೇಬಿಹಾಳ: ಅಧಿಕಾರಿಗಳ ಭಾವಚಿತ್ರಕ್ಕೆ ಪುರಸಭೆ ಸದಸ್ಯರಿಂದ ರಕ್ತಾಭಿಷೇಕ

ABOUT THE AUTHOR

...view details