ವಿಜಯಪುರ:ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎನ್ನುವ ಕಾರಣಕ್ಕೆ ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ನಡೆದಿದೆ.
ಬಾಲಕನೊಬ್ಬ ಗ್ರಾಮಸ್ಥರನ್ನು ವಿನಾಕಾರಣ ನಿಂದಿಸುತ್ತಿದ್ದನಂತೆ. ಇದರಿಂದ ರೋಸಿ ಹೋಗಿದ್ದ ಜನರು ಆತನನ್ನು ಬೆತ್ತಲೆಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಇದೇ ವೇಳೆ ಆತನ ಮುಖಕ್ಕೆ ಕಪ್ಪು ಮಸಿಯನ್ನೂ ಬಳಿದಿದ್ದಾರೆ. ಈ ಘಟನೆಯನ್ನು ಗ್ರಾಮಸ್ಥನೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.