ವಿಜಯಪುರ :ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ಮರ್ಚೆಂಟ್ ಅಸೋಸಿಯೇಷನ್, ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆ ಒಕ್ಕೂಟಗಳು ಎಪಿಎಂಸಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವುರಿಂದ ಕೃಷಿಕ ಸಮುದಾಯ ನಷ್ಟ ಅನುಭವಿಸುವಂತಾಗುತ್ತದೆ. ಕಂಪನಿಗಳು ನೇರವಾಗಿ ರೈತರ ಬೆಳೆ ಖರೀದಿ ಮಾಡುವುರಿಂದ ಸ್ಪರ್ಧಾತ್ಮಕ ಬೆಲೆ ದೊರೆಯುವುದಿಲ್ಲ. ಕಾಯ್ದೆಯಿಂದ ಸರ್ಕಾರಕ್ಕೂ ಸಾವಿರಾರು ಕೋಟಿ ನಷ್ಟ ಉಂಟುಗುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು.