ಕರ್ನಾಟಕ

karnataka

ETV Bharat / state

ಇಂದಿರಾ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಲು ರಾಜಶೇಖರ ಮುಲಾಲಿ ಚಿಂತನೆ - ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ,

ತನ್ನ ಬಳಿ ಕೆಲ ರಾಜಕೀಯ ವ್ಯಕ್ತಿಗಳ ಸಿಡಿ ಇದೆ ಎಂದು ಹೇಳಿಕೆ ನೀಡಿದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ವಿರುದ್ಧ ಮಂಡ್ಯ ಮಾನವ ಹಕ್ಕುಗಳ ಸೇವಾ ಸಮಿತಿ ಜಿಲ್ಲಾಧ್ಯಕ್ಷೆ ಕೆ.ಎಚ್. ಇಂದಿರಾ ದೂರು ದಾಖಲಿಸಿದ್ದರಿಂದ ಪೊಲೀಸರು ತನಗೆ ನೋಟಿಸ್​ ಜಾರಿ ಮಾಡಿದ್ದಾರೆ. ಈ ಸಂಬಂಧ ತಾನು ಕೂಡ ಇಂದಿರಾ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಲು ಮುಂದಾಗಿದ್ದೇನೆ ಎಂದು ಮುಲಾಲಿ ಹೇಳಿದ್ದಾರೆ.

ರಾಜಶೇಖರ ಮುಲಾಲಿ
Rajashekar Mulali

By

Published : Mar 7, 2021, 12:49 PM IST

Updated : Mar 7, 2021, 1:39 PM IST

ವಿಜಯಪುರ:ತನ್ನ ವಿರುದ್ಧ ದೂರು ನೀಡಿರುವ ಮಂಡ್ಯ ಮಾನವ ಹಕ್ಕುಗಳ ಸೇವಾ ಸಮಿತಿ ಜಿಲ್ಲಾಧ್ಯಕ್ಷೆ ಕೆ.ಎಚ್. ಇಂದಿರಾ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಲು ಚಿಂತಿಸಿದ್ದೇನೆ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಸುದ್ದಿಗೋಷ್ಟಿ

ನಗರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ನಡೆಸಿ ಮಾತನಾಡಿದ ಅವರು, ನಿನ್ನೆ ರಾತ್ರಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ದೂರವಾಣಿ ಕರೆ ಮಾಡಿ ಇಂದಿರಾ ಎನ್ನುವವರು ತಮ್ಮ ವಿರುದ್ಧ ದೂರು ನೀಡಿದ್ದಾರೆ. ಈ ಸಂಬಂಧ ನಮಗೆ ನೋಟಿಸ್ ಬಂದಿದೆ. ನಾಳೆ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಾಟ್ಸಪ್​​ ಮೂಲಕ ಮೂಲಕ ನೋಟಿಸ್ ಕಳುಹಿಸಿದ್ದಾರೆ. ಆದರೆ ನಿರಂತರ ಕಾರ್ಯ ಇರುವ ಕಾರಣ ಠಾಣೆಗೆ ಹಾಜರಾಗುವುದು ಕಷ್ಟಕರವಾಗಿದೆ ಎಂದರು.

ಇತ್ತೀಚಿಗೆ ನಡೆಸಿದ ಮಾಧ್ಯಮಗೋಷ್ಟಿಯಲ್ಲಿ ಕೆಲವರ ಬಳಿ ಸಿಡಿ ಇರಬಹುದು ಎಂದಷ್ಟೇ ಹೇಳಿದ್ದೆನೆ ಹೊರತು, ನನ್ನ ಬಳಿ ಸಿಡಿಗಳಿವೆ ಎಂದು ಹೇಳಿಲ್ಲ. ಇಂದಿರಾ ಅವರು ಮಂಡ್ಯದಲ್ಲಿ ದೂರು ನೀಡಬಹುದಿತ್ತು.‌ ಅಲ್ಲಿ ಬಿಟ್ಟು ಬೆಂಗಳೂರಿನ ಕಬ್ಬನ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಏಕೆ ದೂರು ದಾಖಲಿಸಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ. ಅವರ ವಿರುದ್ಧ ನಮ್ಮ ವಕೀಲರ ಮೂಲಕ ಮಾನಹಾನಿ ಮೊಕದ್ದಮೆ ದಾಖಲಿಸಲಾಗುವುದು. ಎರಡು ದಿನದೊಳಗೆ ಅವರಿಗೆ ನೋಟಿಸ್ ಜಾರಿಯಾಗಬಹುದು ಎಂದು ಹೇಳಿದರು.

ಓದಿ: ಸಿಡಿ ಪ್ರಕರಣ: ಯುವತಿಯ ಮನೆ ವಿಳಾಸ ಪತ್ತೆ ಹಚ್ಚಿದ ಪೊಲೀಸರು

ತಾನು‌ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವುದಕ್ಕೆ ಈ ಷಡ್ಯಂತ್ರ ಮಾಡಿರಬಹುದು ಎಂದು ಮುಲಾಲಿ ಸಂಶಯ ವ್ಯಕ್ತಪಡಿಸಿದರು.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ:

ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧಿಸುತ್ತಿದ್ದೇನೆ. ಪರಿಷತ್​​​ನಲ್ಲಿ 3.50 ಲಕ್ಷ ಸದಸ್ಯರಿದ್ದಾರೆ. ಇನ್ನೂ ಸಾಕಷ್ಟು ಸದಸ್ಯರ ನೋಂದಣಿ ಮಾಡಿಸಬೇಕಾಗಿದೆ. ಇದರ ಜೊತೆ ಸಾಹಿತ್ಯ ಪರಿಷತ್​​​​​ನಲ್ಲಿ ಮಹಿಳಾ ಘಟಕ ಸ್ಥಾಪಿಸಿ ಸಾಹಿತ್ಯ ಪರ ಕಾರ್ಯಕ್ರಮ ಸೇರಿದಂತೆ ವಿವಿಧ ಅಭಿವೃದ್ಧಿ ಪರ ಕೆಲಸ ಮಾಡಲು ತಮಗೆ ಮತ ನೀಡಬೇಕೆಂದು ಸಾಹಿತ್ಯ ಪರಿಷತ್ ಸದಸ್ಯರಿಗೆ ಮನವಿ ಮಾಡಿದರು.

Last Updated : Mar 7, 2021, 1:39 PM IST

ABOUT THE AUTHOR

...view details