ಕರ್ನಾಟಕ

karnataka

ವಿಜಯಪುರ: ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಾವು

By

Published : Aug 12, 2022, 8:05 PM IST

ವಿಜಯಪುರದಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.

Road accident in Vijayapur
ವಿಜಯಪುರದಲ್ಲಿ ರಸ್ತೆ ಅಪಘಾತ

ವಿಜಯಪುರ:ಜಿಲ್ಲೆಯ ಸಿಂದಗಿ ಪಟ್ಟಣದ ವಿಜಯಪುರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯ ವಾಟರ್ ಟ್ಯಾಂಕ್ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಓರ್ವ ಸಾವಿಗೀಡಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಚಿತ್ತಾಪುರಕ್ಕೆ ತೆರಳುತ್ತಿದ್ದ ಕಾರು ಎದುರಿಗೆ ಬಂದ ಲಾರಿಗೆ ಡಿಕ್ಕಿಯಾಗಿದೆ. ಪರಿಣಾಮ, ಕಾರು ಚಾಲಕ ಬೆಂಗಳೂರಿನ ಬಾಣಸವಾಡಿ ನಿವಾಸಿ ಶೇಷಾದ್ರಿ ಕುಮಾರ ಪಿ (46) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ:ಬೀದರ್‌: ಸಾರಿಗೆ ಬಸ್​-ಕಾರ್​ ನಡುವೆ ಅಪಘಾತ, ಇಬ್ಬರು ಸಾವು

ಶುಕ್ರವಾರ ಬೆಳಗ್ಗೆ ನಿದ್ರೆ ಮಂಪರಿನಲ್ಲಿದ್ದ ಕಾರು ಚಾಲಕ ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆಯುವ ಭಯದಿಂದ ರಸ್ತೆ ಮೇಲೆ ಬಂದಾಗ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details