ಕರ್ನಾಟಕ

karnataka

By

Published : May 5, 2021, 2:10 PM IST

ETV Bharat / state

ಮುದ್ದೇಬಿಹಾಳ: ಕೋವಿಡ್​ಗೆ ಸಹಕಾರ ಅಭಿವೃದ್ಧಿ ಅಧಿಕಾರಿ ಬಲಿ

ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಮುದ್ದೇಬಿಹಾಳ ತಾಲೂಕಿನ ಹಿರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಕೋವಿಡ್​ಗೆ ಬಲಿಯಾಗಿದ್ದಾರೆ.

ಕೋವಿಡ್​ಗೆ ಸಹಕಾರ ಅಭಿವೃದ್ಧಿ ಅಧಿಕಾರಿ ಬಲಿ
ಕೋವಿಡ್​ಗೆ ಸಹಕಾರ ಅಭಿವೃದ್ಧಿ ಅಧಿಕಾರಿ ಬಲಿ

ಮುದ್ದೇಬಿಹಾಳ:ತಾಲೂಕಿನ ಹಿರಿಯ ಸಹಕಾರ ಅಭಿವೃದ್ಧಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ ಆರ್. ನಾಯಕ(57) ಬುಧವಾರ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್​ಗೆ ಬಲಿಯಾಗಿದ್ದಾರೆ.

ಕಳೆದ ಹಲವು ದಿನಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಅವರು ಈಚೇಗಷ್ಟೆ ಚೇತರಿಸಿಕೊಳ್ಳುತ್ತಿದ್ದರು. ಆದರೆ ಕೋವಿಡ್ ಸೋಂಕು ಅವರನ್ನು ಬಲಿ ತೆಗೆದುಕೊಂಡಿದೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ.

ತಾಲೂಕಿನಲ್ಲಿ ಕಳೆದ ಐದಾರು ವರ್ಷಗಳಿಂದ ಸಹಕಾರ ಅಭಿವೃದ್ಧಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂಡಿ ತಾಲೂಕಿನ ಅಸಿಸ್ಟೆಂಟ್ ರಿಜಿಸ್ಟರ್ ಆಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : ಕೋವಿಡ್ ಸ್ಥಿತಿಗತಿ ಕುರಿತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿದ್ದರಾಮಯ್ಯ

For All Latest Updates

TAGGED:

Muddebihal

ABOUT THE AUTHOR

...view details